ಮೂಡುಬಿದಿರೆ: ಮುಂಬೈ ಬಾಂದ್ರಾ ವೆಸ್ಟ್ ಪಾಲಿ ಹಿಲ್ ಜನತಾ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ, ಮೂಡುಬಿದಿರೆ ಕಡಂದಲೆ ಪರಾರಿ ಮನೆತನದ ಲೋಕೇಶ್ ಶೆಟ್ಟಿ (67) ಶನಿವಾರ ನಿಧನರಾಗಿದ್ದಾರೆ.
ಮೃತರಿಗೆ ಪತ್ನಿ, ಪುತ್ರಿ ಇದ್ದಾರೆ.
ಮೂಡುಬಿದಿರೆ ಮಹಾವೀರ ಕಾಲೇಜಿನಲ್ಲಿ ಬಿಎಸ್ಸಿ ಓದಿದ್ದ ಅವರು ಮುಂಬೈಯಲ್ಲಿ ತಂದೆ ಶಿಮಂತೂರು ಮಜಲಗುತ್ತು ಗೋಪಾಲ ಶೆಟ್ಟಿ ಅವರು ನಡೆಸುತ್ತಿದ್ದ ಹೋಟೆಲ್ ಉದ್ಯಮದಲ್ಲಿ ತೊಡಗಿಸಿಕೊಂಡು ಬಳಿಕ ಸ್ವಂತ ಹೋಟೆಲ್ ನಡೆಸುತ್ತಿದ್ದರು. ಮುಂಬೈ ಖಾರ್ ವೆಸ್ಟ್ ನಲ್ಲಿ ವಾಸವಾಗಿದ್ದ ಅವರು ಮಹಾವೀರ ಕಾಲೇಜು ಬಳಿ ಕೃಷಿಯಲ್ಲೂ ತೊಡಗಿಸಿಕೊಂಡಿದ್ದರು.
ಗುರು ಸತ್ಯಸಾಯಿಬಾಬಾ ಅವರ ಭಕ್ತರಾಗಿದ್ದರು. ದಾನಿಯಾಗಿ, ಬಹಳಷ್ಟು ಮಂದಿಗೆ ಸಹಾಯ ಮಾಡಿದ್ದಾರೆ. ಮಹಾವೀರ ಕಾಲೇಜು ಹಳೆವಿದ್ಯಾರ್ಥಿ ಸಂಘವು ಲೋಕೇಶ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದೆ.