Breaking News

ಮತಾಂತರ, ಗೋ ಹತ್ಯೆ ಕಾನೂನು ಹಿಂಪಡೆವ ದುಸ್ಸಾಹಸ ಬೇಡ: ಶ್ರೀ

 

ಉಡುಪಿ: ರಾಜ್ಯ ಸರ್ಕಾರ ಮತಾಂತರ ನಿಷೇಧ, ಗೋಹತ್ಯಾ ನಿಷೇಧ ಕಾನೂನು ಹಿಂಪಡೆವ ದುಸ್ಸಾಹಸ ಮಾಡದಂತೆ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಎಚ್ಚರಿಸಿದ್ದಾರೆ.

  1.  

ಈ ಕುರಿತು ವಿಡಿಯೊ ಸಂದೇಶದ ಮೂಲಕ ಮಾತನಾಡಿರುವ ಅವರು, ಹಿಂದಿನ ಸರ್ಕಾರ ಸಮಾಜದಲ್ಲಿ ಏರ್ಪಟ್ಟಿದ್ದ ಗೊಂದಲ ಪರಿಹಾರಕ್ಕಾಗಿ ಮತಾಂತರ ನಿಷೇಧ ಕಾಯ್ದೆ ಮತ್ತು ಗೋ ಹತ್ಯಾ ನಿಷೇಧ ಕಾಯ್ದೆ ಜಾರಿಗೆ ತಂದಿತ್ತು. ಪ್ರಸ್ತುತ ಸರ್ಕಾರವು ಈ ಎರಡೂ ಕಾಯ್ದೆಯನ್ನು ಹಿಂಪಡೆವ ನಿರ್ಧಾರ ಅತ್ಯಂತ ಕಳವಳಕಾರಿ ವಿಚಾರ ಎಂದರು.

ಸರ್ಕಾರವು ಕಾನೂನು ಹಿಂಪಡೆಯುವ ದುಸ್ಸಾಹಸ ಮಾಡಬಾರದು. ಈ ವಿಷಯದಲ್ಲಿ ಸರ್ಕಾರವು ಜನಪ್ರತಿನಿಧಿಗಳ ಮೂಲಕ ಜನಾಭಿಪ್ರಾಯ  ಪಡೆದು ಮುಂದಿನ ಹೆಜ್ಜೆ ಇಡಬೇಕು ಎಂದು ಪೇಜಾವರ ಶ್ರೀ ಎಚ್ಚರಿಕೆ ಸಂದೇಶ ನೀಡಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com