Breaking News

ಪುತ್ತೂರು: ಹೆರಿಗೆ ವೇಳೆ ತೀವ್ರ ರಕ್ತಸ್ರಾವ, ಚಿಕಿತ್ಸೆಗೆ ಸ್ಪಂದಿಸದೇ ಮಹಿಳೆ ಸಾವು

 

ಪುತ್ತೂರು: ಹೆರಿಗೆ ವೇಳೆ ತೀವ್ರ ರಕ್ತಸ್ರಾವ ಉಂಟಾಗಿ ಆಶಾ ಕಾರ್ಯಕರ್ತೆ ಮೃತಪಟ್ಟ ಘಟನೆ ಹಿರೇಬಂಡಾಡಿ ಗ್ರಾಮದಲ್ಲಿ ನಡೆದಿದೆ.

  1.  

ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬುವವರ ಪತ್ನಿ ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ ಮೃತಪಟ್ಟಿದ್ದಾರೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ.

ಭವ್ಯ  ಅವರಿಗೆ 3 ನೇ ಹೆರಿಗೆ ಆಗಿದ್ದು, ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡ ಕೂಡಲೇ ಅವರನ್ನು  ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಂಗಳವಾರ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದರು. ಹೆರಿಗೆ ಆಗುತ್ತಲೇ ಅವರಿಗೆ ತೀವ್ರ ರೀತಿಯ ರಕ್ತಸ್ರಾವ ಉಂಟಾಗಿದ್ದು, ಕೂಡಲೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಬುಧವಾರ  ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com