ಹೊನ್ನಾವರ: ಕಳವು ಆರೋಪದಲ್ಲಿ ವಿಚಾರಣೆಗಾಗಿ ಕರೆತಂದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಠಾಣೆಯ ಇನ್ ಸ್ಪೆಕ್ಟರ್, ಪಿಎಸ್ಐ ಸೇರಿ ಐವರು ಅಮಾನತು ಆಗಿದ್ದಾರೆ.
ಚಿನ್ನ ಪಾಲಿಷ್ ಮಾಡುವ ನೆಪದಲ್ಲಿ ಚಿನ್ನ ಕದಿಯುತ್ತಿದ್ದ ಆರೋಪದ ಮೇಲೆ ಬಿಹಾರ ಮ಼ೂಲದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಆದರೆ ದಿಲೀಪ ಮುಂಡಾಲ್ ಎಂಬುವವರು ನಿನ್ನೆ ವಿಷ ಸೇವಿಸಿ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶನಿವಾರ ವಿಚಾರಣೆಗಾಗಿ ಹೊನ್ನಾವರ ಠಾಣೆಗೆ ಕರೆ ತಂಡಿದ್ದ ವೇಳೇ ಈ ವೇಳೆ ಆರೋಪಿ ಬಾಯಾರಿಕೆ ಎಂದು ನೀರು ಕುಡಿಯಲು ಹೋಗಿದ್ದ ವೇಳೆ ನೀರಿನ ಜತೆಗೆ ವಿಷ ಸೇವನೆ ಮಾಡಿದ್ದ. ವಿಷ ಕುಡಿದಿರುವುದು ಗಮನಕ್ಕೆ ಬರುತ್ತಿದ್ದಂತೆ ಆರೋಪಿ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಆರೋಪಿ ಮೃತಪಟ್ಟಿದ್ದಾರೆ.
ಪೊಲೀಸ್ ಠಾಣೆಯಲ್ಲಿ ವಿಷ ಸೇವಿಸಿ ಮೃತಪಟ್ಟ ಹಿನ್ನೆಲೆಯಲ್ಲಿ ಎಸ್ಪಿ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಹೊನ್ನಾವರ ಠಾಣೆಗೆ ಭೇಟಿ ನೀಡಿದ್ದರು.
ಪ್ರಕರಣದಲ್ಲಿ ಹೊನ್ನಾವರ ಠಾಣೆ ಇನ್ ಸ್ಪೆಕ್ಟರ್ ಮಂಜುನಾಥ, ಠಾಣೆ ಅಪರಾಧ ವಿಭಾಗದ ಪಿಎಸ್ ಐ ಮಂಜೇಶ್ವರ ಚಂದಾವರ, ಪೊಲೀಸ್ ಸಿಬ್ಬಂದಿ ಮಹಾವೀರ, ರಮೇಶ, ಸಂತೋಷ ಅವರನ್ನು ಅಮಾನತು ಮಾಡಲಾಗಿದೆ.