Breaking News

ಕುಕ್ಕೆಗೆ ಕ್ರಿಕೆಟಿಗ ರಾಹುಲ್ ಭೇಟಿ: ಪೂಜೆ ಸಲ್ಲಿಕೆ

 

ಸುಬ್ರಹ್ಮಣ್ಯ: ಕುಕ್ಕೆ  ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಟೀಂ ಇಂಡಿಯಾ ಆಟಗಾರ ಕೆ.ಎಲ್. ರಾಹುಲ್ ಸ್ನೇಹಿತರ ಜತೆಗೆ ಭೇಟಿ ನೀಡಿ, ದರ್ಶನ ಪಡೆದುಕೊಂಡರು.

ದರ್ಶನದ ನಂತರ  ಸೇವೆ ನೆರವೇರಿಸಿ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕರು ರಾಹುಲ್ ಅವರಿಗೆ ಶಾಲು ಹೊದಿಸಿ ಪ್ರಸಾದ ನೀಡಿದರು.

  1.  

ಬಳಿಕ ಅವರು ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ನಂತರ ದೇವಳದಲ್ಲಿ ಪ್ರಸಾದ ಭೋಜನ ಸ್ವೀಕರಿಸಿದರು. ಆಡಳಿತ ಕಚೇರಿಗೆ ಭೇಟಿ ನೀಡಿದ ರಾಹುಲ್ ಅವರಿಗೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು.

ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್.ಎಸ್ ಮತ್ತು ರಾಹುಲ್ ಅವರ ಸ್ನೇಹಿತರು ಇದ್ದರು.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com