ಕಾರವಾರ: ಗೋವಾದ ವೆರ್ಣಾ ಕೈಗಾರಿಕಾ ಪ್ರದೇಶದಲ್ಲಿ ಉದ್ಯಮ ನಡೆಸುತ್ತಿದ್ದ ತಾಲೂಕಿನ ಗೋಪಶಿಟ್ಟಾ ಮೂಲದ ಉದ್ಯಮಿ ಶ್ಯಾಮ್ ಪಾಟೀಲ್ ಅವರ ಕುಟುಂಬ ಆತ್ಮಹತ್ಯೆಗೆ ಮಾಡಿಕೊಂಡಿದೆ.
ಪತ್ನಿ ಮತ್ತು ಪುತ್ರ ಕೋಡಿಬಾಗದ ಕಾಳಿ ಸೇತುವೆಯಿಂದ ಜಿಗಿದು ಆತ್ನಹತ್ಯೆ ಮಾಡಿಕೊಂಡಿದ್ದಾರೆ. ಶ್ಯಾಮ್ ಪಾಟೀಲ್ ಗೋವಾ ರಾಜ್ಯದ ಪಾಡಿ ಅರಣ್ಯ ಪ್ರದೇಶದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪುತ್ರ ಹಾಗೂ ಪತ್ನಿಯ ಮೃತದೇಹ ದೇವಬಾಗ ಕಡಲತೀರದಲ್ಲಿ ಪತ್ತೆ ಆಗಿದೆ. ಶ್ಯಾಮ್ ಪಾಟೀಲ್ ಅವರ ಮೃತದೇಹ ಪಾಡಿ ಅರಣ್ಯ ಪ್ರದೇಶದಲ್ಲಿ ಪತ್ತೆ ಸಿಕ್ಕಿದೆ.
ಗುರುವಾರ ದೇವಬಾಗ ಕಡಲತೀರದಲ್ಲಿ ಬಾಲಕ ಹಾಗೂ ತಾಯಿಯ ಮೃತದೇಹ ಪತ್ತೆಯಾಗಿತ್ತು. ಚಿತ್ತಾಕುಲ ಠಾಣೆ ಪೊಲೀಸರು ತನಿಖೆ ಆರಂಭಿಸಿದ ಬಳಿಕ ಕುಟುಂಬದ ಸದಸ್ಯರು ಸಾಮೂಹಿಕ ಆತ್ಮಹತ್ಯೆಗೆ ಮಾಡಿಕೊಂಡಿರುವುದು ಪತ್ತೆ ಆಗಿದೆ.
ಉದ್ಯಮಿ ಶ್ಯಾಮ್ ಪಾಟೀಲ್ ಅವರ ಮೃತದೇಹವು ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗೋವಾ ಕುಕಳ್ಳಿ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಪತ್ನಿ, ಪುತ್ರ ಆತ್ಮಹತ್ಯೆ ಮಾಡಿಕೊಂಡ ಬಳಿಕ ಶ್ಯಾಮ್ ಇಲ್ಲಿಂದ ಗೋವಾಕ್ಕೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಚಿತ್ತಾಕುಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.