ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಐಎಎಸ್ ಪ್ರೊಬೇಷನರಿ ಅಧಿಕಾರಿಯಾಗಿ ನಿಯುಕ್ತಿಗೊಂಡಿರುವ ಮುಕುಲ್ ಚೈನ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಪ್ರೊಬೇಷನರಿ ಅಧಿಕಾರಿಯನ್ನು ಸ್ವಾಗತಿಸಿ, ಅವರ ಕರ್ತವ್ಯಗಳ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
2022ರ ಕರ್ನಾಟಕ ಕೆಡರ್ ನ ಐಎಎಸ್ ಅಧಿಕಾರಿಯಾಗಿರುವ ಮುಕುಲ್ ಜೈನ್ ಮೂಲತಃ ರಾಜಸ್ಥಾನದ ಆಲ್ವಾರ್ ದವರು. ಸಿವಿಲ್ ಎಂಜಿನಿಯರಿಂಗ್ ನಲ್ಲಿ ಬಿ ಟೆಕ್ ಪದವಿ ಪಡೆದಿದ್ದಾರೆ. ಅವರು 2021ರ ಬ್ಯಾಚ್ ನ ಭಾರತೀಯ ಅರಣ್ಯ ಇಲಾಖೆ ಅಧಿಕಾರಿ ಕೂಡ ಆಗಿದ್ದರು.