Breaking News

ಜಾಲತಾಣಗಳ ಮೇಲೆ ತೀವ್ರ ನಿಗಾ, ತಿಂಗಳಲ್ಲಿಯೇ 21 ಪ್ರಕರಣ: ಜೈನ್

 

ಮಂಗಳೂರು: ಧರ್ಮ, ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ನಿರ್ದಾಕ್ಷಿಣ್ಯ ಕ್ರಮ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಎಚ್ಚರಿಕೆ ನೀಡಿದ್ದಾರೆ.

  1.  

ತಿಂಗಳಲ್ಲಿಯೇ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 21 ಪ್ರಕರಣ ದಾಖಲಾಗಿವೆ. ವಾಟ್ಸ್‌ ಆಪ್, ಫೇಸ್‌ ಬುಕ್, ಇನ್ ಸ್ಟಾಗ್ರಾಮ್, ಟ್ವಿಟರ್ ಇನ್ನಿತರ ಜಾಲತಾಣದಲ್ಲಿ ಪೋಸ್ಟ್ ಹಾಕುವವರ ಬಗ್ಗೆ ಪೊಲೀಸ್ ಇಲಾಖೆ ತೀವ್ರ ನಿಗಾ ಇಡಲಿದೆ. ಯಾವುದೇ ರೀತಿಯ ಆಕ್ಷೇಪಾರ್ಹ ಪೋಸ್ಟ್ ಹಾಕಿದಲ್ಲಿ, ಅಂತಹವರ ವಿರುದ್ಧ ಕ್ರಮ ಖಂಡಿತ ಎಂದು ತಿಳಿಸಿದ್ದಾರೆ.

ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಸಂದೇಶಗಳು ಹೆಚ್ಚಾಗಿ ಹರಿದಾಡುತ್ತಿರುವುದು ಕಂಡು ಬರುತ್ತಿವೆ. ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಈ ಬಗ್ಗೆ ಪೊಲೀಸರು ನಿಗಾ ವಹಿಸಲಿದ್ದಾರೆ. ಧರ್ಮದ ವಿಚಾರವಾಗಿ ಪರ- ವಿರೋಧ ಸಂದೇಶಗಳನ್ನು ಪೋಸ್ಟ್, ಶೇರ್ ಮತ್ತು ಕಮೆಂಟ್ ಮಾಡುವ ವ್ಯಕ್ತಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಇಂತಹ ಅಪರಾಧಗಳನ್ನು ಪುನರಾವರ್ತಿಸಿದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  1.  

Leave a Reply

Your email address will not be published. Required fields are marked *