ಸುಳ್ಯ: ಕಾಡು ಪ್ರಾಣಿ ಬೇಟೆಯಾಡುತ್ತಿದ್ದ ಆರೋಪ ಮೇಲೆ ಮೂರು ಮನೆಗಳ ಮೇಲೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳ ತಂಡವು ಕಾಡು ಪ್ರಾಣಿ ಮಾಂಸ ಹಾಗೂ ಕೋವಿ ವಶಕ್ಕೆ ಪಡೆದಿರುವುದು ಸಂಪಾಜೆ ವಲಯದ ದಬ್ಬಾಡ್ಕ ಉಪ ವಲಯದ ಪಟ್ಟಿಘಾಟ್ ಸಮೀಪ ನಡೆದಿದೆ.
ಮದನ್ ಕುಮಾರ್ ಹೊಸೂರು, ಪಾನೇಡ್ಕ ಗಣಪತಿ, ಹಾಗೂ ಪ್ರಸನ್ನ ಪಾನೇಡ್ಕ ಎಂಬವರ ಮನೆಗಳ ಮೇಲೆ ದಾಳಿ ಮಾಡಿದ ಅರಣ್ಯಾಧಿಕಾರಿಗಳು ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಕಾಡು ಪ್ರಾಣಿಗಳ ಮಾಂಸ, ಪದಾರ್ಥ ಮತ್ತು ಕೋವಿ ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆ ಉಪ ಅರಣ್ಯ ಸಂರಕ್ಷಣಧಿಕಾರಿ ಕೆ.ಟಿ ಪೂವಯ್ಯ ಅವರ ಮಾರ್ಗದರ್ಶನದಲ್ಲಿ ನಡೆದಿದ್ದು, ವಲಯ ಅರಣ್ಯ ಅಧಿಕಾರಿ ಮಧು ಸೂದನ್ ನೇತೃತ್ವದಲ್ಲಿ, ಸಿಬ್ಬಂದಿ ಉಪ ವಲಯ ಅರಣ್ಯ ಅಧಿಕಾರಿ ನಿಸಾರ್ ಮುಹಮ್ಮದ್, ಗಸ್ತು ಅರಣ್ಯ ಪಾಲಕ ಚಂದ್ರಪ್ಪ ಬಣಕಾರ್, ಕಾರ್ತಿಕ್ ಡಿ. ಹಾಗೂ ಸಿಬ್ಬಂದಿ ಮನೋಜ್, ದುರ್ಗಾ ಪ್ರಸಾದ್, ಗಗನ್, ಶರತ್, ಶಂಕರ ಪಾಲ್ಗೊಂಡಿದ್ದರು.