ಕಾರವಾರ: ನೂತನ ಜಿಲ್ಲಾಧಿಕಾರಿ ಆಗಿ ಗಂಗೂಬಾಯಿ ಮಾನಕರ್ ಅವರು ಬುಧವಾರ ಅಧಿಕಾರವನ್ನು ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ನೂತನ ಜಿಲ್ಲಾಧಿಕಾರಿಗೆ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ನೂತನ ಜಿಲ್ಲಾಧಿಕಾರಿ ಗಂಗೂ ಬಾಯಿ ಮಾನ್ಕರ್ ಅವರಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಹೂಗುಚ್ಛಗಳನ್ನು ಸ್ವಾಗತಿಸಿಕೊಂಡರು.
‘ಜಿಲ್ಲೆಯಲ್ಲಿ ವ್ಯಾಕಕ ಮಳೆ ಸುರಿಯುತ್ತಿದ್ದು, ಅಧಿಕಾರಿಗಳು ನೆರೆ ಪರಿಸ್ಥಿತಿ ಎದುರಿಸಲು ಸಜ್ಜಾಗಿರಬೇಕು. ಯಾವುದೇ ಕ್ಷಣದಲ್ಲೂ ಪರಿಸ್ಥಿತಿ ಎದುರಿಸಲು ಸಿದ್ದರಾಗಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಹಿಂದೆ ಕೆಲಸ ಮಾಡಿದ್ದೇನೆ, ಆ ಅನುಭವದ ಆಧಾರದಲ್ಲಿ ಕರಾವಳಿ, ಮಲೆನಾಡು ಪ್ರದೇಶವನ್ನು ಒಳಗೊಂಡ ಜಿಲ್ಲೆಯಲ್ಲಿ ಕೆಲಸ ಮಾಡುವುದ ಒಂದು ರೀತಿಯಲ್ಲಿ ಸವಾಲಿನ ಜತೆಗೆ ಹೊಸ ಅನುಭವದ ಜತೆ ಕೆಲಸ ಮಾಡುವುದಾಗಿ ನೂತನ ಜಿಲ್ಲಾಧಿಕಾರಿ ಗಂಗೂ ಬಾಯಿ ಮಾನ್ಕರ್ ಹೇಳಿದರು.