Breaking News

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಇಬ್ಬರ ಬಂಧನ, ಪಿಸ್ತೂಲ್‌ ವಶಕ್ಕೆ

 

ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ನಗರದ ಹೊರವಲಯದ ಬಜಪೆ ಸಮೀಪ ಬಂಧನ ಮಾಡಿದ್ದಾರೆ.

ಬಾಳೆಪುಣಿ ಹೊಸಹಿತ್ತಿಲು ನಿವಾಸಿ ಅಬ್ಬಾಸ್ (61) ಹಾಗೂ ಮೂಲತ ಮಂಜೇಶ್ವರ ಪೈವಳಿಕೆ ನಿವಾಸಿ, ಕುತ್ತಾರಿನಲ್ಲಿರುವ ಯಶವಂತ ಕುಮಾರ್ (45) ಬಂಧಿತ ಆರೋಪಿಗಳು ಎಂದು ಪೊಲೀಸ್‌ ಕಮಿಷನರ್‌ ಕುಲದೀಪ್‌ ಕುಮಾರ್‌ ಜೈನ್‌ ತಿಳಿಸಿದ್ದಾರೆ.

  1.  

ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಬೈಕ್ ವೊಂದರಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮಾರಕಾಯುಧವಾದ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದರೆಂದು ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು ಎಂದು ತಿಳಿಸಿದ್ದಾರೆ.

ಬಂಧಿತರಿಂದ ಒಂದು ಪಿಸ್ತೂಲ್, ಎರಡು ಮೊಬೈಲ್ ಫೋನ್‌ ಹಾಗೂ ಹೀರೊ ಹೊಂಡಾ ಫ್ಯಾಷನ್ ಪ್ಲಸ್ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಮೌಲ್ಯ 1.45 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಆರೋಪಿ ಪೈಕಿ ಅಬ್ಬಾಸ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಹಾಗೂ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹಾಗೂ ಅಬಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿವೆ. ಇನ್ನೋರ್ವ ಆರೋಪಿ ಯಶವಂತ ಕುಮಾರ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕುಂಬಳೆ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆ ಪ್ರಕರಣ ಹಾಗೂ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣವೊಂದು ದಾಖಲಾಗಿರುತ್ತದೆ. ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್. ಎಂ., ಪಿಎಸ್ಐ ಯವರಾದ ರಾಜೇಂದ್ರ ಬಿ., ಸುದೀಪ್ ಎಂ. ವಿ., ಶರಣಪ್ಪ ಭಂಡಾರಿ, ನರೇಂದ್ರ, ಎಎಸ್ಐ ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು. ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com