ಉಡುಪಿ: ನಾಪತ್ತೆಯಾಗಿದ್ದ ಕಾರ್ಕಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಶವವು ಬಾವಿಯಲ್ಲಿ ಪತ್ತೆಯಾಗಿದ್ದಾರೆ. ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ (35) ಮೃತದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಅಸಹಜ ಸಾವು ಎಂದು ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಅ.19 ರಂದು ಶೃತಿನ್ ಶೆಟ್ಟಿ ಕಾರ್ಕಳ ಠಾಣೆಗೆ ಕರ್ತವ್ಯಕ್ಕೆಂದು ತೆರಳಿ, ಅಲ್ಲಿ ರಜೆ ಹಾಕಿ ನಾಪತ್ತೆ ಆಗಿದ್ದರು.
ಪಡುಬಿದ್ರೆ ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ (35) ಎರಡು ತಿಂಗಳ ಹಿಂದೆದೇ ಹೆಡ್ ಕಾನ್ಸ್ ಟೇಬಲ್ ಆಗಿ ಬಡ್ತಿ ಹೊಂದಿ ಕಾರ್ಕಳ ನಗರ ಠಾಣೆಗೆ ಬಂದಿದ್ದರು. 19 ರಂದು ಸಂಜೆ 7.30ಕ್ಕೆ ಪತ್ನಿಗೆ ಫೋನ್ ಮಾಡಿ, ಮನೆಗೆ ಬರುತ್ತಿದ್ದೇನೆ ಎಂದು ಶೃತಿನ್ ಹೇಳಿದ್ದರು. ಮನೆಗೂ ಬಾರದೇ ಇದ್ದುದರಿಂದ ಮತ್ತು ಪತಿ ಫೋನ್ ಸ್ವಿಚ್ಡ್ ಆಫ್ ಆಗಿದ್ದರಿಂದ ಪತ್ನಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಬಾವಿಯಲ್ಲಿ ಶವ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಸಾವಿನ ಹಿಂದೆ ಬೇರೆ ಕಾರಣ ಇದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.