Breaking News

ಮೂಲ್ಕಿ: ಮಗನಿಂದಲೇ ತಾಯಿಯ ಕೊಲೆಯ ಶಂಕೆ, ಆರೋಪಿ ಬಂಧನ

 

ಮೂಲ್ಕಿ: ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರ ಎಂಬಲ್ಲಿ ಮಹಿಳೆ ಮನೆಯಲ್ಲಿ ಅಸಹಜವಾಗಿ ಸಾವನ್ನಪ್ಪಿದ್ದು, ಕೊಲೆ ಆರೋಪದ ಮೇಲೆ ಮಹಿಳೆ ಮಗನನ್ನು ಬಜ್ಪೆ ಪೊಲೀಸರು ಬಂಧನ ಮಾಡಿದ್ದಾರೆ.

ಮೃತ ಮಹಿಳೆ ರತ್ನಾ ಶೆಟ್ಟಿ (60) ಹಾಗೂ ಆರೋಪಿಯನ್ನು ರವಿರಾಜ್ ಶೆಟ್ಟಿ (33) ಎಂದು ಗುರುತಿಸಲಾಗಿದೆ.

ರತ್ನಾ ಶೆಟ್ಟಿ ಅವರು ಕಟೀಲು ದುರ್ಗಾ ನಗರದ ಬಾಲಕೃಷ್ಣ ಎಂಬುವವರ ಮನೆಯ ಬದಿ ಕೋಣೆಯಲ್ಲಿ ಮಗ ರವಿರಾಜ್ ಜೊತೆ ವಾಸ್ತವ್ಯ ಮಾಡಿದ್ದರು. ಗಿಡಿಗೆರೆ ಚರ್ಚ್ ಬಳಿಯ ಬಾಲಕೃಷ್ಣ ಎಂಬುವವರ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದರು.  ಅನಾರೋಗ್ಯದ ನಿಮಿತ್ತ ಕೆಲಸಕ್ಕೆ ಹೋಗಿರಲಿಲ್ಲ. ಈ ನಡುವೆ ಮಗ ರವಿರಾಜ್ ಶೆಟ್ಟಿ ತಾಯಿ ಜತೆ ವಾಸ್ತವ್ಯವಿದ್ದ ಕೋಣೆಗೆ ಬೀಗ ಹಾಕಿ ಹೊರಗೆ ಹೋಗಿದ್ದಾನೆ.

  1.  

ಭಾನುವಾರ ಬೆಳಿಗ್ಗೆ ಮನೆ ಸುತ್ತಮುತ್ತ ವಾಸನೆ ಬರುವುದನ್ನು ಕಂಡು ಅನುಮಾನದಿಂದ ಮನೆಯವರು ಮಹಿಳೆ ವಾಸ್ತವ್ಯವಿದ್ದ ಕೋಣೆಯ ಕಿಟಕಿಯಲ್ಲಿ ನೋಡಿದಾಗ ಮಹಿಳೆ ಮುಖ ಬಟ್ಟೆಯಿಂದ ಮುಚ್ಚಿದ ಸ್ಥಿತಿಯಲ್ಲಿ ಹಾಗೂ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಕಂಡು ಬಂದಿದ್ದು ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಾಯಿಯ ಶವ ಪತ್ತೆಯಾದ ಬಗ್ಗೆ ಸ್ಥಳೀಯರಿಗೆ ಮಾಹಿತಿ ಬಂದ ಕೂಡಲೇ ಮಗ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು ಕೂಡಲೇ ಪೊಲೀಸರು ಕಾರ್ಯಪ್ರವೃತ್ತರಾಗಿ ಆರೋಪಿ ರವಿರಾಜ್ ನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನೂಪ್ ಅಗ್ರವಾಲ್ , ಎಸಿಪಿ ಮನೋಜ್ ಕುಮಾರ್, ಶ್ವಾನದಳ ಬೆರಳಚ್ಚು ತಜ್ಞರು, ಬಜ್ಪೆ ಪೊಲೀಸರು ಭೇಟಿ ನೀಡಿ, ತನಿಖೆ ನಡೆಸುತ್ತಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com