Breaking News

ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳಿಗೆ ಷರತ್ತು ಬದ್ಧ ಜಾಮೀನು

 

ಚಿತ್ರದುರ್ಗ: ಪೊಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಸಿಕ್ಕ ಹಿನ್ನಲೆಯಲ್ಲಿ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಇಲ್ಲಿನ ಕಾರಾಗೃಹದಿಂದ ಬಿಡುಗಡೆ ಮಾಡಲಾಯಿತು.

1 ನೇ ಪೊಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಬಿಡುಗಡೆ ಆದೇಶ ಪ್ರತಿ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಇದೀಗ ಜಿಲ್ಲಾ ಕಾರಾಗೃಹದ ಅಧಿಕಾರಿಗಳು ಕಾನೂನು ಪ್ರಕ್ರಿಯೆ ನಡೆಸಿ, ಮುರುಘಾ ಶ್ರೀಗಳನ್ನು ಬಿಡುಗಡೆ ಮಾಡಿದರು.

  1.  

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಜೈಲು ಸೇರಿದ್ದ ಮುರುಘಾ ಶ್ರೀಗಳಿಗೆ ನ.8 ರಂದು ಹೈಕೋರ್ಟ್ ಒಂದು ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಇನ್ನೊಂದು ಪ್ರಕರಣದ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ಜಾಮೀನು ಸಿಕ್ಕರೂ ಬಿಡುಗಡೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮುರುಘಾ ಶ್ರೀ ಪರ ವಕೀಲರು ಶ್ರೀಗಳ ಬಿಡುಗಡೆಗೆ ಕೋರಿ ಚಿತ್ರದುರ್ಗ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಕೋರ್ಟ್‌ ನಿಂದ ಷರತ್ತು ಬದ್ದ ಜಾಮೀನು ಮಂಜೂರಿ: 2 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡುವುದು, ಯಾವುದೇ ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ. ನ್ಯಾಯಾಲಯದ ವಶಕ್ಕೆ ಪಾಸ್‍ಪೋರ್ಟ್ ಸಲ್ಲಿಸಬೇಕು. ವಿಡಿಯೊ ಕಾನ್ಫೆರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಬೇಕು. ಜಾಮೀನು ಮಂಜೂರು ಆದೇಶವನ್ನು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ನ್ಯಾಯಾಲಯ ವಿಧಿಸಿದ ಷರತ್ತು ಉಲ್ಲಂಘಿಸಿದರೆ, ಜಾಮೀನು ರದ್ದಾಗಲಿದೆ. ಅದೇ ರೀತಿ, ಪ್ರಮುಖವಾಗಿ ಪ್ರಕರಣದ ವಿಚಾರಣೆ ಮುಗಿಯುವವರೆಗೆ ಚಿತ್ರದುರ್ಗ ಜಿಲ್ಲೆಯ ಪ್ರವೇಶ ಮಾಡಬಾರದು ಎಂದು ಷರತ್ತುಗಳನ್ನು ಉಲ್ಲೇಖಿಸಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com