ಹಾಸನ: ಪ್ರೀತಿ ನಿರಾಕರಸಿದ್ದಕ್ಕಾಗಿ ಪ್ರಿಯಕರ ತನ್ನ ಪ್ರೇಯಸಿ ಕತ್ತು ಕೊಯ್ದು ಬರ್ಬರ ಹತ್ಯೆ ಮಾಡಿದ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ. ಸುಚಿತ್ರಾ (20) ಕೊಲೆಯಾದ ಯುವತಿ. ತೇಜಸ್ (23) ಕೊಲೆ ಮಾಡಿರುವ ಪ್ರಿಯಕರ.
ಸುಚಿತ್ರಾ ಆಲೂರು ತಾಲೂಕಿನ ಕವಳಗೆರೆ ಗ್ರಾಮದವರು. ಮೊಸಳೆಹೊಸಳ್ಳಿ ಎಂಜಿನಿಯರ್ ಕಾಲೇಜಿನಲ್ಲಿ ಬಿಇ ಮೆಕಾನಿಕಲ್ ಪದವಿ ಓದುತ್ತಿದ್ದರು. ಹಾಸನ ತಾಲೂಕಿನ ಶಂಕರನಹಳ್ಳಿ ಗ್ರಾಮದ ತೇಜಸ್, ಸುಚಿತ್ರಾ ಅವರ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಪ್ರೀತಿಸಲು ನಿರಾಕರಿಸಿದ್ದಕ್ಕೆ ತೇಜಸ್ ಸುಚಿತ್ರಾ ಅವರನ್ನು ಕುಂತಿಬೆಟ್ಟಕ್ಕೆ ಕರೆದೊಯ್ಯುದು ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಆರೋಪಿ ತೇಜಸ್ ಪರಾರಿಯಾಗಿದ್ದಾನೆ.
ತೇಜಸ್ ಕೂಡ ಮೊಸಳೆಹೊಸಳ್ಳಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.