ಮಧ್ಯಪ್ರದೇಶ: ಅಕ್ರಮ ಮರಳು ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ ಅನ್ನು ಮೈಮೇಲೆಯೇ ಚಲಾಯಿಸಿದ ಪರಿಣಾಮ ಸ್ಥಳೀಯ ಕಂದಾಯ ಇಲಾಖೆ ಅಧಿಕಾರಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ನಡೆದಿದೆ.
ಪ್ರಸನ್ನ ಸಿಂಗ್ ಮೃತ ಅಧಿಕಾರಿ ಆಗಿದ್ದು, ಬೊಹರಿ ತಾಲ್ಲೂಕಿನ ಖಡ್ಡಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗಸ್ತುನಿರತ ಸರಕಾರಿ ಅಧಿಕಾರಿಗಳ ತಂಡದಲ್ಲಿದ್ದ ಸಿಂಗ್, ಗೋಪಾಲಪುರ ಪ್ರದೇಶದ ಸೋನ್ ನದಿಯಿಂದ ಅಕ್ರಮವಾಗಿ ಮರಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ನ್ನು ನಿಲ್ಲಿಸಲು ಪ್ರಯತ್ನಿಸಿದ್ದರು. ಆದರೆ ಚಾಲಕ ಅವರ ಮೇಲೆಯೇ ಟ್ರ್ಯಾಕ್ಟರ್ ಚಲಾಯಿಸಿದ ಪರಿಣಾಮ ಅಧಿಕಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಪೋಲಿಸರು ತಿಳಿಸಿದರು.
ಘಟನೆ ಬಳಿಕ ಟ್ರ್ಯಾಕ್ಟರ್ನೊಂದಿಗೆ ಪರಾರಿಯಾಗಿದ್ದ ಚಾಲಕ ಶುಭಂ ವಿಶ್ವಕರ್ಮ (25) ಎಂಬುವವರನ್ನು ಬಂಧಿಸಲಾಗಿದ್ದು,ಆತನ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.