Breaking News

ಚುನಾವಣಾ ಆಯೋಗದ ಸೂಚನೆ ಚಾಚೂತಪ್ಪದೇ ಪಾಲಿಸಿ: ಡಿಸಿ ಮುಲ್ಲೈ

 

ಮಂಗಳೂರು: ಚುನಾವಣಾ ಆಯೋಗವು ಜಾರಿಗೊಳಿಸುವ ಮಾರ್ಗಸೂಚಿಗಳನ್ನು ಚಾಚೂತಪ್ಪದೇ ಪಾಲನೆ ಮಾಡಬೇಕು. ಚುನಾವಣಾ ಅಧಿಕಾರಿಗಳು ನಿರ್ವಹಿಸಬೇಕಾದ ಕಾರ್ಯಗಳ ಬಗ್ಗೆ ಆಯೋಗವು ಸ್ಪಷ್ಟವಾಗಿ ತಿಳಿಸಿದ್ದು, ಅದರಂತೆಯೇ ಪ್ರತಿಯೊಬ್ಬರು ಗಡುವಿಗಾಗಿ ಕಾಯದೆಯೇ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಚುನಾವಣಾ ಪೂರ್ವಸಿದ್ದತೆ ನಿರ್ಣಾಯಕ ಮತಗಟ್ಟೆಗಳ ಗುರುತಿಸುವಿಕೆ ಬಗ್ಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.

  1.  

ಆತಂಕ, ಭಯ ರಹಿತವಾಗಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಪ್ರತಿಯೊಬ್ಬರು ಸಜ್ಜಾಗಬೇಕು.ಗಡಿ ಪ್ರದೇಶಗಳಾದ ಸುಳ್ಯ ಹಾಗೂ ಈಶ್ವರಮಂಗಳ, ತಲಪಾಡಿ, ಬಂಟ್ವಾಳ, ಬೆಳ್ತಂಗಡಿಯಲ್ಲಿ ಚೆಕ್ ಪೋಸ್ಟ್‌ ಗಳನ್ನು ತೆರೆಯಬೇಕು. ಚುನಾವಣೆಯ ವೇಳೆಯಲ್ಲಿ ಬೇಕಾಗುವ ಸಾಮಗ್ರಿಗಳನ್ನು ರೂಪಾಯಿ 1 ಲಕ್ಷದೊಳಗೆ ಭರಣ ಮಾಡಬೇಕು. ಅಗತ್ಯ ಸಾಮಗ್ರಿಗಳಿಗೆ ಹೆಚ್ಚಿನ ಒತ್ತು ನೀಡಿ ಖರೀದಿಸಿ ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ ಸಂತೋಷ ಕುಮಾರ್, ಡಿಸಿಪಿ ಸಿದ್ಧಾರ್ಥ್ ಗೋಯಲ್, ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್, ಪುತ್ತೂರು ಎಸಿ ಗಿರೀಶ್ ನಂದನ್, ಎಸಿ ಹರ್ಷವರ್ಧನ್, ತಹಶೀಲ್ದಾರ್ ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com