Breaking News

ಟ್ಯಾಗೋರ್ ಕಡಲ ತೀರದಲ್ಲಿ ಸ್ವಚ್ಛತೆಗೆ ಆದ್ಯತೆ: ಡಿ.ಸಿ ಮಾನಕರ

 

ಕಾರವಾರ: ಇಲ್ಲಿನ ರವೀಂದ್ರನಾಥ ಟ್ಯಾಗೋರ್ ಕಡಲ ತೀರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.

ಬುಧವಾರ ಬೀಚ್ ನಲ್ಲಿ ಕಸ ಸ್ವಚ್ಛಗೊಳಿಸುವ ವಾಹನದ ಕಾರ್ಯವನ್ನು ವೀಕ್ಷಿಸಿ ಅವರು ಮಾತನಾಡಿದರು.

  1.  

ರವೀಂದ್ರನಾಥ ಟ್ಯಾಗೋರ್ ಕಡಲ ತೀರದ ಸೌಂದರ್ಯವನ್ನು ಕಾಪಾಡಲು ಈ ಹಿಂದೆ ನೀಡಲಾಗಿದ್ದ ಬೀಚ್ ಕ್ಲಿನಿಂಗ್ ಯಂತ್ರವು ಪುಣೆಯಿಂದ ಆಗಮಿಸಿದ್ದ ತಂತ್ರಜ್ಞರು ದುರಸ್ತಿಗೊಳಿಸಿದ್ದು, ಈ ಯಂತ್ರದ ಮೂಲಕ ಪ್ರತಿದಿನ ಬೀಚ್ ಅನ್ನು ಸ್ವಚ್ಛಗೊಳಿಸುವ ಮೂಲಕ ಬೀಚ್ ನಲ್ಲಿ ನೈರ್ಮಲ್ಯ ಕಾಪಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬೀಚ್ ನಲ್ಲಿ ಪ್ರವಾಸಿಗರು ಮತ್ತು‌ ಸಾರ್ವಜನಿಕರ ಉಪಯೋಗಕ್ಕಾಗಿ ಶೌಚಾಲಯ ನಿರ್ಮಾಣದ ಅಗತ್ಯತೆಯನ್ನು ಗಮನಿಸಿದ ಜಿಲ್ಲಾಧಿಕಾರಿ, ಬೀಚ್ ನಲ್ಲಿ ಸಿ.ಆರ್.ಜೆಡ್ ನಿಯಮಗಳ ಉಲ್ಲಂಘನೆ ಆಗದಂತೆ ಶೌಚಾಲಯ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com