Breaking News

ತುಮಕೂರು: ಬೈಕ್‌ ಗೆ ಕಾರು ಡಿಕ್ಕಿ, ಇಬ್ಬರು ಸಾವು, ಪ್ರಕರಣ ದಾಖಲು

 

ತುಮಕೂರು: ಬೈಕ್‌ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕ್ಯಾತಸಂದ್ರದ ಸರಕಾರಿ ಪ್ರೌಢಶಾಲೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

  1.  

ಕೌತಮಾರನಹಳ್ಳಿ ಗ್ರಾಮದ ನಿವಾಸಿಗಳಾದ ಪ್ರೀತಮ್ (15) ಮತ್ತು ವಿಜಯಕುಮಾರ್‌ (15) ಮೃತಪಟ್ಟವರು ಎಂದು ಹೇಳಲಾಗುತ್ತಿದೆ.

ಗುರುವಾರ ರಾತ್ರಿ 10. 30 ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿಯಲ್ಲಿ ಎಫ್.ಡಿ.ಎ. ಆಗಿರುವ ಸಹೋದರಿಯನ್ನು ಕರೆದುಕೊಂಡು ಬರಲು ಬೈಕ್‌ ನಲ್ಲಿ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com