ಮಂಗಳೂರು: ಹಿಜಾಬ್ ನಿಷೇಧ ಮಾಡುವ ವಿಷಯದಲ್ಲಿ ನಮ್ಮ ಸರಕಾರವು ಸಂವಿಧಾನವನ್ನು ಬಿಟ್ಟು ಯಾವುದೇ ಕೆಲಸ ಮಾಡುವುದಿಲ್ಲ. ಸಂವಿಧಾನದ ಚೌಕಟ್ಟಿನ ಒಳಗೆಯೇ ಎಲ್ಲವನ್ನು ತೀರ್ಮಾನ ಮಾಡುತ್ತೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.
ಮಂಗಳೂರಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಈ ವೇಳೆ ಮಾತನಾಡಿ, ಹಿಜಾಬ್ ನಿಷೇಧ ಮಾಡಿಲ್ಲ ಎಂದು ಬೊಮ್ಮಾಯಿ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ನಾವು ಆದೇಶವನ್ನೇ ಮಾಡಿಲ್ಲ ಎಂದು ಕೂಡ ಹೇಳಿದ್ದಾರೆ. ಒಂದು ವೇಳೆ ಮಾಡಿದ್ದರೂ ನಮ್ಮ ಸರಕಾರವು ಇದನ್ನು ಪರಿಶೀಲನೆ ಮಾಡುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಸಾಧಕ– ಬಾಧಕಗಳನ್ನು ನೋಡಿಕೊಂಡು ಸರಕಾರವು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದೆ. ಯಾವುದೇ ಗೊಂದಲ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದರು.
ಈ ಸಮುದಾಯವದವರು ಹಿಂದಿನಿಂದಲೂ ಹಿಜಾಬ್ ಹಾಕಿಕೊಂಡು ಬರುತ್ತಿದ್ದಾರೆ. ಈಚೆಗೆ ಬಿಜೆಪಿ ಸರ್ಕಾರ ಬಂದಾಗ ಅದರ ಬಗ್ಗೆ ವಿವಾದ ಉಂಟಾಯಿತು. ಸರಕಾರವು ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದರು.