Breaking News

ಪಾಲಿಕೆ ಸದಸ್ಯ ಜಗದೀಶ್ ಶೆಟ್ಟಿ ಆತ್ಮಹತ್ಯೆಗೆ ಯತ್ನ, ವಿಷ ಪದಾರ್ಥ ಸೇವನೆ

 

ಮಂಗಳೂರು: ಮಹಾನಗರ ಪಾಲಿಕೆಯ ಬೋಳೂರು ವಾರ್ಡ್‌ ಬಿಜೆಪಿ ಪಾಲಿಕೆ ಸದಸ್ಯ ಜಗದೀಶ್ ಶೆಟ್ಟಿ ಗುರುವಾರ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ವರದಿ ಆಗಿದೆ.

  1.  

ಕೃತ್ಯಕ್ಕೆ ನಿಜವಾದ ಕಾರಣ ತಿಳಿದು ಬಂದಿಲ್ಲ. ನಗರದ ಸ್ಟೇಟ್‌ ಬ್ಯಾಂಕ್ ಬಳಿಯ ಖಾಸಗಿ ಹೋಟೆಲ್‌ ಎದುರು ಕಾರಿನಲ್ಲಿ ಕುಳಿತು ಜಗದೀಶ್ ಶೆಟ್ಟಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಾರಿನಲ್ಲಿ ಇದ್ದ ಅವರನ್ನು ಗಮನಿಸಿದ ಸ್ಥಳೀಯರು ಮತ್ತು ಪೊಲೀಸರು ಗಾಜು ಒಡೆದು ಹೊರ ತೆಗೆದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಖಾಸಗಿ ಆಸ್ಪತ್ರೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com