Breaking News

ನಟ ಯಶ್‌ ಜನ್ಮದಿನಕ್ಕೆ ಕಟೌಟ್‌ ನಿಲ್ಲಿಸುವ ವೇಳೆ ವಿದ್ಯುತ್‌ ಸ್ಪರ್ಶ ಮೂರು ಮಂದಿ ಸಾವು, ಕುಟುಂಬಕ್ಕೆ ಪರಿಹಾರ ಘೋಷಣೆ

 

ಗದಗ: ನಟ ಯಶ್ ಜನ್ಮದಿನಕ್ಕೆ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರ ಸಾವಿಗೀಡಾಗಿ, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದೆ.

ಸೂರಣಗಿ ಗ್ರಾಮದ ಹನುಮಂತ ಮಜ್ಜುರಪ್ಪ ಹರಿಜನ (21), ಮುರಳಿ ನೀಲಪ್ಪ ನಡವಿನಮನಿ (20), ನವೀನ ನೀಲಪ್ಪ ಗಾಜಿ (19) ಎಂಬುವವರು ಮೃತಪಟ್ಟಿದ್ದಾರೆ. ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಲಕ್ಷ್ಮೇಶ್ವರ ತಾಲೂಕು ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ.

ಸೋಮವಾರ ನಟ ಯಶ್‌ ಅವರ ಜನ್ಮದಿನವನ್ನು ಆಚರಿಸಲು ಸೂರಣಗಿ ಗ್ರಾಮದ‌ 10ಕ್ಕೂ ಹೆಚ್ಚು ಯುವಕರು 25 ಅಡಿ ಎತ್ತರದ ಕಟೌಟ್ ನಿಲ್ಲಿಸುವ ವೇಳೆ ಕಟೌಟ್ ಗೆ ವಿದ್ಯುತ್ ತಂತಿ ತಗುಲಿ ಈ ದುರ್ಘಟನೆ ಸಂಭವಿಸಿದೆ.

  1.  

ಯುವಕರ ಹಠಾತ್ ಸಾವಿನಿಂದಾಗಿ ಸೂರಣಗಿ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.
ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಡಾ. ಚಂದ್ರು ಲಮಾಣಿ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಪರಿಹಾರ ಘೋಷಣೆ: ಬದುಕಿ ಬಾಳಬೇಕಿದ್ದ ಯುವಕರು ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ, ಅವರನ್ನು ನಂಬಿದ್ದ ಕುಟುಂಬ ಸಂಕಷ್ಟಕ್ಕೆ ಸಿಲುಕಿದ್ದು, ಈ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ಮೃತ ದುರ್ದೈವಿಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶಿಸಿಲಾಗಿದೆ ಎಂದು ಸಚಿವ ಎಚ್.ಕೆ. ಪಾಟೀಲ್‌ ತಿಳಿಸಿದ್ದಾರೆ.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com