Breaking News

ಮದಕರಿಪುರ ಸೇತುವೆ ಬಳಿ ಕಾರು, ಟ್ಯಾಂಕರ್ ನಡುವೆ ಭೀಕರ ರಸ್ತೆ ಅಪಘಾತ ಇಬ್ಬರ ಸಾವು

 

ಚಿತ್ರದುರ್ಗ: ಇಲ್ಲಿನ ಮದಕರಿಪುರ ಸೇತುವೆ ಬಳಿ ಕಾರು ಮತ್ತು ಟ್ಯಾಂಕರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

  1.  

ಬೆಂಗಳೂರು ಮೂಲದ ನಿರ್ಮಲಾ (55), ವಿನುತಾ (40) ಮೃತರು. ಗಾಯಾಳುಗಳಾದ ಯಶಸ್ (02), ಫಣಿರಾಜ (36) ರಶ್ಮಿ (32) ಎಂಬುವರನ್ನು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ.

ಚಿತ್ರದುರ್ಗದ ಮದಕರಿಪುರ ಹೊಸ ಹೈವೆ ಬ್ರಿಡ್ಜ್ ಬಳಿ ಘಟನೆ ನಡೆದಿದೆ. ಕಾರಿನಲ್ಲಿದ್ದವರು ಬೆಂಗಳೂರು ಕಡೆಯಿಂದ ಹೊಸಪೇಟೆ ಕಡೆ ಹೋಗುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಇನ್‌ ಸ್ಪೆಕ್ಟರ್‌ ಮುದ್ದುರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಚಿತ್ರದುರ್ಗದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com