ಮಂಗಳೂರು/ ಉಡುಪಿ: ಇದೇ 16ರಂದು ರಾಜ್ಯದಾದ್ಯಂತ ತೆರೆ ಕಾಣಲಿರುವ ಸಂತೋಷ್ ಕೊಡಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾ ಪ್ರಚಾರ ಕಾರ್ಯವು ಭರ್ಜರಿ ಆಗಿ ನಡೆಯುತ್ತಿದೆ.
ಮಂಗಳೂರಿನಲ್ಲಿ ತುಳು ಸಾಹಿತ್ಯ ಅಕಾಡೆಮಿ ಸಿರಿ ಚಾವಡಿಯಲ್ಲಿ ಕರಾವಳಿ ಲೇಖಕಿಯರ ಸಂಘ ಮತ್ತು ಉಡುಪಿಯ ಜಯಲಕ್ಷ್ಮೀ ಸಿಲ್ಕ್ಸ್ ಸಂಸ್ಥೆಯಲ್ಲಿ ಮಹಿಳಾ ಸಿಬ್ಬಂದಿ ಜತೆಗೆ ಸಂವಾದ ನಡೆಸಿದರು.
ರವಿಕೆ ಪ್ರಸಂಗ ಚಿತ್ರತಂಡ ಜಯಲಕ್ಷ್ಮೀ ಸಿಲ್ಕ್ ಸಂಸ್ಥೆಯಲ್ಲಿ ಬಹಳಷ್ಟು ಸಮಯ ಕಾಲ ಕಳೆದರು. ಸಂಸ್ಥೆಯ ಮಾಲೀಕ ವೀರೇಂದ್ರ ಹೆಗ್ಗಡೆ ಅವರು ಜೊತೆಯಲ್ಲಿದ್ದು ಸಿನಿಮಾ ತಂಡಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಚಿತ್ರದ ಮುಖ್ಯ ಪಾತ್ರಧಾರಿ ಗೀತಾ ಭಟ್, ನಿರ್ದೇಶಕ ಸಂತೋಷ್ ಕೊಡಂಕೇರಿ, ಚಿತ್ರಕ್ಕೆ ಸಂಭಾಷಣೆ ಬರೆದಿರುವ ಪಾವನಾ ಸಂತೋಷ್, ರಘು ಪಾಂಡೇಶ್ವರ್, ರಕ್ಷಕ್ ಇದ್ದರು.
ಮಂಗಳೂರಿನಲ್ಲಿ ನಡೆದ ಸಂವಾದದಲ್ಲಿ ಮಹಿಳಾ ಒಕ್ಕೂಟದ ಅಧ್ಯೆಕ್ಷೆ ವಿಜಯಲಕ್ಷ್ಮೀ ಶೆಟ್ಟಿ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯೆ ರೂಪಕಲಾ ಆಳ್ವ, ಟ್ರಾಫಿಕ್ ಕಮಿಷನರ್ ಗೀತಾ ಕುಲಕರ್ಣಿ ಇದ್ದರು.