ಮಂಗಳೂರು: ಇಲ್ಲಿನ ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿ ಎದುರು ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸುಹಾನ್ ಆಳ್ವ ಅವರ ಕಾಂಗ್ರೆಸ್ ಸಮಾವೇಶದ ಬ್ಯಾನರ್ ಅನ್ನು ಕೆಲ ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ನಡೆದಿದೆ.
ಬ್ಯಾನರ್ ಹರಿದು ಹಾಕಿರುವುದರ ಹಿಂದೇ ಕಾಣದ ಕೈಗಳ ಕೈವಾಡವಿದ್ದು, ಈ ಕತ್ಯ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸುಹಾನ್ ಆಳ್ವ ಅವರು ಆಗ್ರಹಿಸಿದ್ದಾರೆ.
ಬ್ಯಾನರ್ ಹರಿದು ಹಾಕಿರುವ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.