ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಆಖಾಡ ಸಿದ್ದವಾಗಿದ್ದು, ಮೊದಲ ಪಟ್ಟಿ ಬಿಡುಗಡೆ ಆಗಿದೆ. ಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣುಗೇಪಾಲ್, ಅಜಯ್ ಮಕೇನ್, ಪವನ್ ಖೇರಾ ಅವರು ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದರು. ರಾಜ್ಯದ 7 ಮಂದಿಗೆ ಟಿಕೆಟ್ ಫೈನಲ್ ಮಾಡಲಾಗಿದೆ. ತೀವ್ರ ಕುತೂಹಲ ಮೂಡಿಸಿರುವ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯಾರು ಅಭ್ಯರ್ಥಿಗಳು ಎಂಬುದರ ಬಗ್ಗೆ ಹೈಕಮಾಂಡ್ ಗುಟ್ಟು ಬಿಟ್ಟುಕೊಟ್ಟಿಲ್ಲ.
39 ಅಭ್ಯರ್ಥಿಗಳ ಪಟ್ಟಿಯಲ್ಲಿ 15 ಸಾಮಾನ್ಯ, 24 ಎಸ್ಸಿ, ಎಸ್ಟಿ, ಓಬಿಸಿ ವರ್ಗದ ನಾಯಕರಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ರಾಜ್ಯದ 7 ಕ್ಷೇತ್ರಕ್ಕೆ ಟಿಕೆಟ್ ಅಂತಿಮಗೊಳಿಸಲಾಗಿದೆ.
ಕೇರಳದಲ್ಲಿ 15 ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ತೆಲಂಗಾಣದಲ್ಲಿ 4, ಚತ್ತೀಸ್ಗಢದಲ್ಲಿ 6, ಮೇಘಾಲಯದ 2, ಸಿಕ್ಕಿಂ, ತ್ರಿಪುರ ಮತ್ತು ನಾಗಲ್ಯಾಂಡ್ ರಾಜ್ಯಗಳಲ್ಲಿ ತಲಾ ಒಂದು ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಲಾಗಿದೆ ಎಂದು ಕೆಸಿ ವೇಣುಗೋಪಾಲ್ ಮಾಹಿತಿ ನೀಡಿದರು.
ಕರ್ನಾಟಕದ 7 ಮಂದಿಗೆ ಟಿಕೆಟ್: ಹಾವೇರಿ : ಅನಂತಸ್ವಾಮಿ ಗಡ್ಡದೇವರಮಠ, ತುಮಕೂರು: ಮುದ್ದ ಹನುಮೇಗೌಡ, ಶಿವಮೊಗ್ಗ: ಗೀತಾ ಶಿವರಾಜಕುಮಾರ್, ಬೆಂಗಳೂರು ಗ್ರಾಮಾಂತರ : ಡಿ.ಕೆ ಸುರೇಶ್, ಹಾಸನ : ಶ್ರೇಯಸ್ ಪಾಟೀಲ್ ವಿಜಯಪುರ: ಎಸ್.ಆರ್ ಅಲಗೂರು, ಮಂಡ್ಯ: ವೆಂಕಟರಾಮೇಗೌಡ (ಸ್ಟಾರ್ ಚಂದ್ರು) ಅವರಿಗೆ ಟಿಕೆಟ್ ಫೈನಲ್ ಮಾಡಲಾಗಿದೆ. ರಾಹುಲ್ ಗಾಂಧಿ ಅವರ ಹೆಸರು ಮೊದಲ ಪಟ್ಟಿಯಲ್ಲಿಯೇ ಇದ್ದು, ಅವರು ವಯನಾಡಿನಿಂದ ಸ್ಪರ್ಧಿಸುವುದು ಖಚಿತ ಆಗಿದೆ.