ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ನಡೆದ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ತಮ್ಮ ನಿರ್ಧಾರವನ್ನು ಘೋಷಣೆ ಮಾಡಿದ್ದಾರೆ.
ಇದು ಆತುರದ ನಿರ್ಧಾರವಲ್ಲ. ಇದು ಮೋದಿ ವಿರೋಧಿ ನಡೆ ಕೂಡ ಅಲ್ಲ. ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕು ಹಾಕಿಕೊಳ್ಳಬಾರದು. ಹಿಂದೂತ್ವಕ್ಕೆ, ಕಾರ್ಯಕರ್ತರಿಗೆ ಅನ್ಯಾಯ ಆಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಪ್ರಕಟ ಮಾಡಿದ್ದೇನೆ ಎಂದರು.
ನಾಮಪತ್ರ ಸಲ್ಲಿಕೆ ವೇಳೆ ಜನಸಾಗರವೇ ಹರಿದು ಬರಬೇಕು. ಮೋದಿ ಕಂಡ ಬಿಜೆಪಿ ಪಕ್ಷ ನಮ್ಮದಾಗಬೇಕು. ಅಪ್ಪ ಮಕ್ಕಳಿಂದ ಪಕ್ಷವನ್ನು ಉಳಿಸುವ ಕೆಲಸಕ್ಕೆ ಕೈಹಾಕಿದ್ದೇನೆ ಎಂದರು.