ನವದೆಹಲಿ: ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಕೆ.ಎಸ್.ಈಶ್ವರಪ್ಪ ಅವರ ಬೇಜವಾಬ್ದಾರಿ ಹೇಳಿಕೆಗೆ ಉತ್ತರ ಕೊಡುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಗುಡುಗಿದ್ದಾರೆ.
ಬುಧವಾರ ಸುದ್ದಿಗಾರರ ಜತೆಗೆ ಅವರು ಮಾತನಾಡಿ, ಬಿ. ವೈ. ವಿಜಯೇಂದ್ರ ಅವರು ಏನು ಎಂಬುದನ್ನು ರಾಜ್ಯದ ಜನರು ತೀರ್ಮಾನ ಮಾಡುತ್ತಾರೆ ಎಂದರು.
ತುಮಕೂರು ಟಿಕೆಟ್ ಆಕಾಂಕ್ಷಿ ಆಗಿದ್ದ ಜೆ.ಸಿ.ಮಾಧುಸ್ವಾಮಿ ಅವರ ಜತೆಗೆ ಮಾತನಾಡುತ್ತೇನೆ. ಮಾಧುಸ್ವಾಮಿ ಹಾಗೂ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ಜತೆಗೂಡಿ ಕೆಲಸ ಮಾಡಲಿದ್ದಾರೆ ಎಂದರು.