ಸಿರಸಿ: ಕಾಂಗ್ರೆಸ್ ಸೇರ್ಪಡೆಯಾಗಬೇಕು ಎಂಬ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರ ವಿರುದ್ಧ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿ ಗೋಡೆಯ ಮೇಲೆ ನಮ್ಮ ಪಕ್ಷ, ನಮ್ಮ ಹಕ್ಕು, ಭ್ರಷ್ಟರಿಗಿಲ್ಲಿ ಜಾಗ ಇಲ್ಲ ಎಂಬ ಪೋಸ್ಟರ್ ಅಂಟಿಸಿ, ಹೆಬ್ಬಾರ್ ಸೇರ್ಪಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕಾಂಗ್ರೆಸ್ ಸೇರ್ಪಡೆಯ ಹೆಬ್ಬಾರ್ ಅವರ ಕನಸಿಗೆ ಕೊಳ್ಳಿ ಏಟು ಬಿದ್ದಿದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳಕರ್ ಅವರ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಾಯಕರು, ಕಾರ್ಯಕರ್ತರು ಸಭೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಕೆಲವರು ಈ ಕೃತ್ಯ ನಡೆಸಿದ್ದಾರೆ. ಸಭೆ ಆರಂಭಕ್ಕೂ ಮೊದಲು ಕೆಲವರು ಪೋಸ್ಟರ್ ಅಂಟಿಸುವುದರ ಜತೆಗೆ ಚಿತ್ರ, ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿ, ಮಂತ್ರಿ ಆಗಿದ್ದ ಹೆಬ್ಬಾರ್ ಅವರು ಘರ್ ವಾಪಸ್ಸಿಗೆ ಕೆಲ ಶಾಸಕರು ಹಾಗೂ ಮುಖಂಡರು, ಕಾರ್ಯಕರ್ತರ ವಿರೋಧವಿದೆ ಎಂದು ಹೇಳಲಾಗುತ್ತಿದೆ.