Breaking News

ತೀರ್ಥಹಳ್ಳಿ: ರಂಜಾನ್ ಉಪವಾಸ ಮುಗಿಸಿ, ಈಜಲು ಹೋಗಿದ್ದ ಮೂವರ ಬಾಲಕರ ದುರ್ಮರಣ

 

ತೀರ್ಥಹಳ್ಳಿ: ರಂಜಾನ್ ಉಪವಾಸ ಮುಗಿದ ನಂತರ ಈಜಲು ಹೋಗಿದ್ದ ಮೂವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

  1.  

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ರಾಮ ಮಂಟಪದ ಪಕ್ಕ ಈ ಘಟನೆ ನಡೆದಿದೆ. ರಫನ್, ಇಯನ್, ಸಮ್ಮರ್ ಮೃತ ಬಾಲಕರು ಎಂದು ಮೂಲಗಳಿಂದ ತಿಳಿದು ಬಂದಿದೆ.

ಮೂವರು ಬಾಲಕರು  ರಂಜಾನ್ ಉಪವಾಸ ಮುಗಿಸಿ ಸ್ನಾನಕ್ಕೆ ಈಜಲು ಹೋಗಿ ನಾಪತ್ತೆ ಆಗಿದ್ದರು. ಬಳಿಕ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಮೂವರು ಬಾಲಕರ ಶವ ಪತ್ತೆ ಆಗಿದೆ. ಸತತವಾಗಿ ಒಂದು ಘಂಟೆಯಿಂದ ತುಂಗಾ ನದಿ ತೀರದಲ್ಲಿ ಅಗ್ನಿಶಾಮಕ ದಳ ಮತ್ತು ಪೊಲೀಸರು ಹುಡುಕಾಟ ನಡೆಸಿ ಮೃತದೇಹ ಹೊರ ತೆಗೆದಿದ್ದಾರೆ. ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com