Breaking News

ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣಾ ಕಣದಲ್ಲಿ 10 ಮಂದಿ ಅಭ್ಯರ್ಥಿಗಳು

 

ಉಡುಪಿ: ಉಡುಪಿ -ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಇಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದ್ದು ಯಾರು ಕೂಡ ನಾಮಪತ್ರ ಹಿಂಪಡೆದಿಲ್ಲ. 10 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಇದ್ದಾರೆ ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

  1.  

ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಕೆ. ಜಯಪ್ರಕಾಶ್ ಹೆಗ್ಡೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಕೋಟ ಶ್ರೀನಿವಾಸ ಪೂಜಾರಿ, ಬಹುಜನ ಸಮಾಜ ಪಾರ್ಟಿಯ ಕೆ.ಟಿ ರಾಧಾಕೃಷ್ಣ, ಜನಹಿತ ಪಕ್ಷದ ಅಭ್ಯರ್ಥಿಯಾದ ಸುಪ್ರೀತ್ ಕುಮಾರ್ ಪೂಜಾರಿ, ಕರುನಾಡ ಸೇವಕರ ಪಕ್ಷದ ಅಭ್ಯರ್ಥಿಯಾದ ಶಬರೀಶ್ ಆರ್, ಕರ್ನಾಟಕ ರಾಷ್ಟç ಸಮಿತಿ ಪಕ್ಷದ ಅಭ್ಯರ್ಥಿಯಾದ ಎಲ್ ರಂಗನಾಥ್ ಗೌಡ, ಪ್ರೌಟಿಸ್ಟ್ ಸರ್ವ ಸಮಾಜ ಪಕ್ಷದ ಅಭ್ಯರ್ಥಿಯಾದ ಎಂ.ಕೆ ದಯಾನಂದ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಸಚಿನ್ ಬಿ.ಕೆ ಮತ್ತು ಪಕ್ಷೇತರ ಅಭ್ಯರ್ಥಿಗಳಾದ ಸುಧೀರ್ ಕಾಂಚನ್ ಹಾಗೂ ವಿಜಯಕುಮಾರ್ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಎಂದು ಮಾಹಿತಿ ನೀಡಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com