Breaking News

ಭಾರಿ ಮಳೆಗೆ ಮೀನುಗಾರಿಕಾ ಬೋಟ್ ಮುಳುಗಡೆ, ನಾಲ್ವರು ಮೀನುಗಾರರ ರಕ್ಷಣೆ

 

ಕಾರವಾರ: ಅರಬ್ಬಿ ಸಮುದ್ರದಲ್ಲಿ ಗಾಳಿ ಮಳೆಗೆ ಮೀನುಗಾರಿಕಾ ಬೋಟ್ ವೊಂದು ಮುಳುಗಡೆ ಆಗಿದೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಓಂ ಮಹಾಗಣಪತಿ ಎಂಬ ಹೆಸರಿನ ಬೋಟ್ ಮುಳುಗಡೆಯಾಗಿದೆ. ಬೋಟ್ ನಲ್ಲಿದ್ದ 4 ಮಂದಿ ಮೀನುಗಾರರ ರಕ್ಷಣೆ ಮಾಡಲಾಗಿದೆ. ಮುಳುಗಡೆ ಆಗಿರುವ ಬೋಟ್, ಮಹಾದೇವ ಖಾರ್ವಿ ಎಂಬುವವರಿಗೆ ಸೇರಿದ್ದು.

  1.  

ಬೆಳಿಗ್ಗೆ 5 ಗಂಟೆಗೆ  ನಾಲ್ಕು ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಆದರೆ, ಅರಬ್ಬಿ ಸಮದ್ರದಲ್ಲಿ ಶನಿವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಕಾಣಿಸಿಕೊಂಡ ವ್ಯಾಪಕ ಗಾಳಿ ಮಳೆಗೆ ಬೋಟ್ ಸಂಪೂರ್ಣ ಮುಳುಗಡೆಯಾಗಿದೆ. ಕೂಡಲೇ ಇನ್ನೊಂದು ಬೋಟ್‌ನಲ್ಲಿ ಇದ್ದವರು ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ.

ಘಟನೆಯಿಂದಾಗಿ ಬೋಟ್ ಮಾಲೀಕರಿಗೆ ದೊಡ್ಡ ಮಟ್ಟದ ನಷ್ಟ ಉಂಟಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಾದ್ಯಂತ ಭಾರಿ ಗಾಳಿ ಮಳೆ ಶನಿವಾರ ಬೆಳಿಗ್ಗೆಯೇ ಆರಂಭವಾಗಿತ್ತು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com