ಮಂಗಳೂರು: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ರಥಬೀದಿಯ ಸರಕಾರಿ ಬಾಲಕಿಯರ ಶಾಲೆಯಲ್ಲಿ ಮತ ಚಲಾಯಿಸಿದರು.
ಕ್ಯಾ. ಬ್ರಿಜೇಶ್ ಚೌಟ ಅವರು ಬೂತ್ ಸಂಖ್ಯೆ 17ರಲ್ಲಿ ತಮ್ಮ ತಂದೆ, ತಾಯಿ ಜೊತೆಗೆ ಮತ ಚಲಾವಣೆಗೆ ಬಂದಿದ್ದರು. ಮತ ಚಲಾಯಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಚೌಟ, ಭಾರತದ ಭವಿಷ್ಯಕ್ಕಾಗಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಗ್ಗಿನಿಂದಲೇ ಮತದಾರರು ಭಾರೀ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದಾರೆ.