Breaking News

ಮೂಡುಬಿದಿರೆ: ಮಂಗಳೂರು ವಿ.ವಿ ಅಂತರ ಕಾಲೇಜು ಸಾಫ್ಟ್ ಬಾಲ್ ಪಂದ್ಯಾಟ ಉದ್ಘಾಟಿಸಿದ ಥೋಮಸ್

 

ಮಂಗಳೂರು: ಇಲ್ಲಿನ ವಿ.ವಿ ಅಂತರ ಕಾಲೇಜು ಮಟ್ಟದ ಪುರುಷರ ಹಾಗೂ ಮಹಿಳೆಯರ ವಿಭಾಗದ ಸಾಫ್ಟ್ ಬಾಲ್ ಪಂದ್ಯಾಟ ಮೂಡುಬಿದಿರೆ ಮಹಾವೀರ ಕಾಲೇಜಿನ ಕ್ರೀಡಾಂಗಣದಲ್ಲಿ ಸೋಮವಾರ ನಡೆಯಿತು.

  1.  

ಮೂಡುಬಿದಿರೆ ಪುರಸಭಾ ಸದಸ್ಯ, ಕಾಲೇಜಿನ ಹಳೆ ವಿದ್ಯಾರ್ಥಿ ಪಿ.ಕೆ. ಥೋಮಸ್ ಅವರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ, ಜೀವನದಲ್ಲಿ ಸೋಲು ಗೆಲುವು ಇದ್ದಂತೆ ಕ್ರೀಡೆಯಲ್ಲಿಯೂ ಇರುತ್ತದೆ. ಮೊದಲು ನಾವು ಸೋಲುವುದನ್ನು ಕಲಿತರೆ ಮುಂದೆ ಸತತ ಪ್ರಯತ್ನದಿಂದ ಗೆಲುವನ್ನು ಸಾಧಿಸಲು ಸಾಧ್ಯವಿದೆ ಎಂದರು.

ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಕಿಶೋರ್ ಕುಮಾರ್ ಸಿ.ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು. ಕಾಲೇಜು ಆಡಳಿತ ಮಂಡಳಿ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ ಅಧ್ಯಕ್ಷತೆ ವಹಿಸಿದ್ದರು.
ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಶೆಟ್ಟಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ರಮೇಶ್ ಭಟ್, ಎಂ.ಕೆ.ಅನಂತ್ ರಾಜ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಧನಂಜಯ ಶೆಟ್ಟಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಹರೀಶ್, ದೈಹಿಕ ಶಿಕ್ಷಣ ನಿರ್ದೇಶಕ ಅಕ್ಷಿತ್ ರೈ, ಪಂದ್ಯಾಟದ ವೀಕ್ಷಕ ಸಂದೀಪ್ ಸಾಲಿಯಾನ್ ಮತ್ತು ಕ್ರೀಡಾ ಕಾರ್ಯದರ್ಶಿ ಚೇತನ್ ಇದ್ದರು. ವಿದ್ಯಾರ್ಥಿನಿ ಶ್ರುತಿ ಸ್ವಾಗತಿಸಿ, ಪ್ರಣಮ್ಯ ಜೈನ್ ನಿರೂಪಿಸಿದರು. ಶ್ರಾವ್ಯ ವಂದಿಸಿದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com