ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆಮುಕ್ರಿ ಕ್ರಾಸ್ ನಲ್ಲಿ ಖಾಸಗಿ ಬಸ್ ಪಲ್ಟಿ ಹೊಡೆದು ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ಮೃತರನ್ನು ತುಮಕೂರಿನ ಲೋಕೇಶ್ (26), ಚಿಕ್ಕಬಳ್ಳಾಪುರದ ರುದ್ರೇಶ್ (38) ಎಂದು ಗುರುತಿಸಲಾಗಿದೆ. ಗೌರಿಬಿದನೂರಿನ ರಜನಿ (30) ಎಂಬುವವರ ಮುರಿದಿದ್ದು, ಉಳಿದ 49 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.
ಗೌರಿ ಬಿದನೂರಿನಿಂದ ಬಸ್ ಧರ್ಮಸ್ಥಳಕ್ಕೆ ಹೋಗುವಾಗ ಈ ಘಟನೆ ನಡೆದಿದೆ, ಬಸ್ ನಲ್ಲಿ 53 ಮಂದಿ ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಚಾಲಕನ ಅತೀ ವೇಗದಿಂದಾಗಿ ಗೇರುಸೊಪ್ಪ ಸಮೀಪದ ಸುಳೆಮುರ್ಕಿ ಕ್ರಾಸ್ ನಲ್ಲಿ ಬಸ್ ಪಲ್ಟಿಯಾಗಿ ಬಿದ್ದಿದೆ. ಇನ್ನು ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಹಾಗೂ ಹೊನ್ನಾವರದ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
An incident took place on Friday when a private bus overturned at Sulemurki Cross in Honnavara, Uttara Kannada district, two people on the spot died.