Breaking News

ಕೇಂದ್ರದಲ್ಲಿ ಸರಕಾರ ರಚನೆ ಕಸರತ್ತು, ಎನ್ಡಿಎಗೆ ಬೆಂಬಲ ಎಂದು ನಾಯ್ಡು, ಬತ್ತಿದ ಇಂಡಿಯಾ ಕನಸು

 

ನವದೆಹಲಿ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್‌. ಚಂದ್ರಬಾಬು ನಾಯ್ಡು ಅವರು ಬಿಜೆಪಿ ನೇತೃತ್ವದ ಎನ್‌ಡಿಎಗೆ ತಮ್ಮ ಬೆಂಬಲ ಮತ್ತೊಮ್ಮೆ ಸ್ಪಷ್ಟ ಪಡಿಸಿದ್ದಾರೆ. ಕೇಂದ್ರದಲ್ಲಿ ಹೊಸ ಸರ್ಕಾರ ರಚಿಸಲು ತಮ್ಮ ಪಕ್ಷ ಬಿಜೆಪಿ ಬೆಂಬಲಿಸಲಿದೆ ಎಂದು ತಿಳಿಸಿದ್ದಾರೆ.

  1.  

ದಿಲ್ಲಿಗೆ ಹೋಗುತ್ತಿದ್ದೇನೆ. ಮತದಾರರ ಬೆಂಬಲ ಖುಷಿ ನೀಡಿದೆ. ರಾಜಕಾರಣದಲ್ಲಿ ಏಳು ಬೀಳುಗಳು ಸಹಜ. ಇದೊಂದು ಐತಿಹಾಸಿಕ ಚುನಾವಣೆ. ಟಿಡಿಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪಕ್ಷದ ಕಾರ್ಯಕರ್ತರ ಅಪಾರ ಶ್ರಮವಿದೆ. ಪ್ರಜಾಪ್ರಭುತ್ವ ರಕ್ಷಣೆಗಾಗಿ ಐದು ವರ್ಷ ಹೋರಾಡಿದ್ದೇವು, ಅದು ಇಂದು ಯಶಸ್ವಿ ಆಗಿದ್ದೇವೆ ಎಂದರು.

ಚುನಾವಣಾ ಫಲಿತಾಂಶ ಘೋಷಣೆಯ ನಂತರ ಬಿಜೆಪಿಗೆ ಸ್ವಂತ ಬಲದ ಬಹುಮತ ದೊರೆಯದೆ ಇರುವುದರಿಂದ ಮೈತ್ರಿಪಕ್ಷಗಳಾದ ಟಿಡಿಪಿ ಹಾಗೂ ಜೆಡಿಯು ನೆರವಿನ ಜತೆಗೆ ಸರಕಾರ ರಚಿಸಬೇಕಾದ ಒತ್ತಡಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ, ಈ ಎರಡು ಪಕ್ಷಗಳ ನಾಯಕರಾದ ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಅವರನ್ನು ತನ್ನತ್ತ ಸೆಳೆಯಲು ಬಾರಿ ಕಸರತ್ತು ಪ್ರಾರಂಭಿಸಿತ್ತು. ಆದರೆ, ಇದರ ಬೆನ್ನಿಗೇ ಚಂದ್ರಬಾಬು ನಾಯ್ಡು ನೀಡಿರುವ ಈ ಹೇಳಿಕೆ ಮಹತ್ವ ಪಡೆದುಕೊಂಡಿದ್ದು, ಮತ್ತೊಬ್ಬ ಎನ್ಡಿಎ ನಾಯಕರಾದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಕೂಡ ಬೆಂಬಲ ಘೋಷಣೆ ಮಾಡುವ ಸಾಧ್ಯತೆ ಇದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com