Breaking News

ಮೋದಿ ಪದಗ್ರಹಣದ ವಿಜಯೋತ್ಸವ ಮುಗಿಸಿ ವಾಪಸ್ ಬರುವ ವೇಳೆ ಇಬ್ಬರ ಮೇಲೆ ಚೂರಿ ಇರಿತ

 

ಮಂಗಳೂರು: ಇಲ್ಲಿನ ಮುಡಿಪು ಸಮೀಪದ ಬೋಳಿಯಾರು ಬಳಿ ತಂಡವೊಂದು ಇಬ್ಬರ ಮೇಲೆ ದಾಳಿ ಮಾಡಿ ಚೂರಿಯಿಂದ ಇರಿದಿರುವ ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್ ಹಾಗೂ ನಂದನ್ ಎಂಬವರಿಗೆ ಚೂರಿಯಿಂದ ಇರಿಯಲಾಗಿದ್ದು ಗಾಯಾಳುಗಳಿಗೆ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

  1.  

ಪ್ರಧಾನಿ ನರೇಂದ್ರ ಮೋದಿ ಅವರ ಪದಗ್ರಹಣದ ವಿಜಯೋತ್ಸವ ಬೋಳಿಯಾರ್ ನಲ್ಲಿ ನಡೆದಿತ್ತು, ವಿಜಯೋತ್ಸವ ಮುಗಿಸಿ ಮನೆಗೆ ವಾಪಸ್ ಆಗುವ ವೇಳೆ ಬೋಳಿಯಾರ್ ಬಾರ್ ಎದುರು ತಂಡವೊಂದು ಇಬ್ಬರನ್ನು ಅಡ್ಡಗಟ್ಟಿ ಚೂರಿಯಿಂದ ಇರಿದು ಪರಾರಿಯಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

ದಾಳಿಗೆ ಒಳಗಾದವರನ್ನು ಹರೀಶ್ ಮತ್ತು ನಂದನ್  ಮೇಲೆ ಚೂರಿಯಿಂದ ಇರಿದು ತಂಡವೊಂದು ಪರಾರಿಯಾಗಿದೆ ಎನ್ನಲಾಗಿದೆ. ಹರೀಶ್ ಅಂಚನ್ ಗಂಭೀರವಾಗಿ  ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ‌ ಸೇರಿದಂತೆ ಅನೇಕ ಮುಖಂಡರು ಭೇಟಿ ನೀಡಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧನ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com