Breaking News

ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ಬೆಳ್ತಂಗಡಿ, ಬಂಟ್ವಾಳ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸೇರಿದಂತೆ ಎಲ್ಲ ತಾಲ್ಲೂಕುಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಜುಲೈ 4 ರಂದು ಹೆಚ್ಚು ಮಳೆ ಸುರಿಯುತ್ತಿರುವುದರಿಂದ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲ್ಲೂಕಿನಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಹಶೀಲ್ದಾರ್‌ ಅವರು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  1.  

ತೋಡು, ಹಳ್ಳ ಸೇತುವೆಗಳನ್ನು ದಾಟಿ ಶಾಲೆಗೆ ಬರುವ ಸಾಕಷ್ಟು ವಿದ್ಯಾರ್ಥಿಗಳು ಇದ್ದು, ಮುಂಜಾಗ್ರತಾ ಕ್ರಮವಾಗಿ ಗುರುವಾರ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com