ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಪ್ಪಿನಂಗಡಿ ಶಾಖೆಯ ವಾರ್ಷಿಕೋತ್ಸವದ ಅಂಗವಾಗಿ ಜೇಸಿಐ ಉಪ್ಪಿನಂಗಡಿ ಚಾರಿಟಬಲ್ ಟ್ರಸ್ಟ್ , ಜೇಸಿಐ ಉಪ್ಪಿನಂಗಡಿ ಆಶ್ರಯದಲ್ಲಿ ಹಲಸು ಹಬ್ಬ – 2024 ಕಾರ್ಯಕ್ರಮದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಇದೇ ಭಾನುವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2 ಗಂಟೆಯವರಿಗೆ ಎಚ್. ಎಂ. ಅಡಿಟೋರಿಯಂನಲ್ಲಿ ಆಯೋಜಿಸಲಾಗಿದೆ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೈದ್ಯಕೀಯ ಶಿಬಿರದಲ್ಲಿ ಕಣಚೂರು ಆಯುರ್ವೇದ ಆಸ್ಪತ್ರೆಯ ನುರಿತ ವೈದರ ತಂಡದವರಿಂದ ಸಾಮಾನ್ಯ ವೈದ್ಯಕೀಯ ಪರೀಕ್ಷೆ, ಮಧುಮೇಹ ರಕ್ತ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ ,ಕೀಲು ಮತ್ತು ಗಂಟು ನೋವು ತಪಾಸಣೆ, ಮೂಲವ್ಯಾದಿ ತಪಾಸಣೆ, ಸ್ತ್ರೀರೋಗ ಮತ್ತು ಪ್ರಸೂತಿ ತಪಾಸಣೆ, ಉಚಿತ ಔಷಧಿ ವಿತರಣೆ, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಇತರ ವೈದ್ಯಕೀಯ ಸೌಲಭ್ಯ ಕೂಡ ಹಮ್ಮಿಕೊಳ್ಳಲಾಗಿದೆ. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.