Breaking News

ಮಂಗಳೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ, ಹುಲಿ ಕುಣಿತದ ಆಕರ್ಷಣೆ

 

ಮಂಗಳೂರು: ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಗುರುವಾರ ಮಂಗಳೂರು ದಸರಾ ಮಹೋತ್ಸವವನ್ನು ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ರೂವಾರಿ ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಅವರು ಉದ್ಘಾಟನೆ ಮಾಡಿದರು.

ಮಂಗಳೂರು ದಸರಾದ ವಿಶೇಷ ಆಕರ್ಷಣೆ ಶಾರದಾ ಮಾತೆ ವಿಗ್ರಹವನ್ನು ದೇವಳದ ಪ್ರಾಂಗಣದಲ್ಲಿ ಪ್ರದಕ್ಷಿಣೆ ಮಾಡಿಸಿ ದರ್ಬಾರ್ ಸಭಾಂಗಣದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಇದೇ ವೇಳೆ ಮಹಾ ಗಣಪತಿ ಸೇರಿದಂತೆ ನವದುರ್ಗೆಯರ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ಅ. 13 ರವರೆಗೆ ವಿಶೇಷ ಪೂಜೆ ಹಾಗೂ ಅಲಂಕಾರ ಸಹಿತ ಪೂಜಿಸಲಾಗುತ್ತದೆ.

  1.  

ಉದ್ಘಾಟನೆ ವೇಳೆ ಹುಲಿವೇಷಧಾರಿಗಳಿಂದ ಕುಣಿತ ಸೇವೆ ನಡೆಯಿತು. 9 ತಿಂಗಳ ಮಗು ಕೂಡ ಹುಲಿ ವೇಷದಲ್ಲಿ ಕಂಗೊಳಿಸಿದ್ದು ವಿಶೇಷವಾಗಿತ್ತು. ಮಂಗಳೂರು ದಸರಾಕ್ಕೆ ಹುಲಿ ಕುಣಿತವು ವಿಶಿಷ್ಟವಾದ ಮೆರುಗು ನೀಡಲಿದೆ.

ಕುದ್ರೋಳಿ ಕ್ಷೇತ್ರವು ವಿಶೇಷ ಅಲಂಕಾರದೊಂದಿಗೆ ಕಂಗೊಳಿಸುತ್ತಿದ್ದು, ಮಂಗಳೂರು ನಗರವು ವಿದ್ಯುತ್ ದೀಪದ ಅಲಂಕಾರದೊಂದಿಗೆ ದಸರಾ ಸಂಭ್ರಮ ಇಮ್ಮಡಿಗೊಳಿಸಲು ಸಜ್ಜಾಗಿದೆ.

ಇದೇ 13 ರಂದು ಸಂಜೆ ಮೆರವಣಿಗೆ ಮೂಲಕ ಮಂಗಳೂರು ದಸರಾ ಸಂಪನ್ನಗೊಳ್ಳಲಿದೆ.

  1.  

Leave a Reply

Your email address will not be published. Required fields are marked *