Breaking News

ರಾಜ್ಯದಲ್ಲಿ ಇರುವುದು ಕಳ್ಳರ ಸರಕಾರ, ಪರಿಷತ್ ಉಪ ಚುನಾವಣೆಯಲ್ಲಿ ಗೆಲುವು ನಮ್ಮದೇ: ನಳಿನ್ ಕುಮಾರ್ ಕಟೀಲ್

 

ಮಂಗಳೂರು:  ಮೈಸೂರು ದಸರಾ ಕಾರ್ಯಕ್ರಮದಲ್ಲಿ  ಕೂಡ ಮುಖ್ಯಮಂತ್ರಿ ರಾಜಕೀಯ ಮಾತುಗಳನ್ನಾಡುವ ಮೂಲಕ ತಮ್ಮ ತಪ್ಪುಗಳನ್ನು ಮರೆ ಮಾಚುವ ಕೆಲಸ ಸಿದ್ದರಾಮಯ್ಯ ಅವರಿಂದ ನಡೀತಾ ಇದೆ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ರೈತರ ಆತ್ಮಹತ್ಯೆ ದೊಡ್ಡ ಪ್ರಮಾಣದಲ್ಲಿ ನಡೆದಿದೆ. ಮುಖ್ಯಮಂತ್ರಿ ಅವರ ಮೇಲೆ ಎಫ್ ಐಆರ್ ದಾಖಲಾದರು ಕೂಡ ಅವರು ರಾಜೀನಾಮೆ ನೀಡದೇ ಪ್ರಕರಣದ ಮೇಲೆ ಪ್ರಭಾವ ಬೀರುವ ಕೆಲಸ ಆಗುತ್ತಿದೆ, ಸಿದ್ದರಾಮಯ್ಯ ಅವರಿಗೆ ಆತ್ಮವೂ ಇಲ್ಲ ಆತ್ಮಸಾಕ್ಷಿಯೂ ಇಲ್ಲ, ರಾಜ್ಯದಲ್ಲಿ ಕಳ್ಳರ ಸರಕಾರ ಇದೆ ಎಂದು ಮಾಜಿ ಸಂಸದ ಹಾಗೂ ಮಾಜಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್  ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಗ್ರಾಮ ಪಂಚಾಯತ್ ಗಳ ಬಲವರ್ಧನೆಗೆ ಕೇಂದ್ರದ ನರೇಂದ್ರ ಮೋದಿ ಅವರ ನಾಯಕತ್ವದ ಎನ್ ಡಿಎ ಸರಕಾರ ಕಾರಣವಾಗಿದೆ. ಗ್ರಾಮ ಪಂಚಾಯತ್ ಗಳಿಗೆ ಕೇಂದ್ರದಿಂದ ನೇರವಾಗಿ ಅನುದಾನ ಬಿಡುಗಡೆ, ನರೇಗಾ, ಸ್ವರ್ಣ ಗ್ರಾಮ ಯೋಜನೆ , ಪಂಚಾಯತ್ ಸದಸ್ಯರಿಗೆ ಗೌರವಧನ ಬಿಜೆಪಿ ನೇತೃತ್ವದ ಸರಕಾರದ ಕೊಡುಗೆ. ಆರೂವರೆ ವರ್ಷ ಬಿಜೆಪಿ ಬೆಂಬಲಿತ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನ ಪರಿಷತ್ ಸದಸ್ಯರಾಗಿ ಸಕ್ರೀಯರಾಗಿದ್ದರು. ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ಕಾರಣ ತೆರವು ಆದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಿಶೋರ್ ಕುಮಾರ್ ಪುತ್ತೂರು ಬಿಜೆಪಿ  ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಅವರನ್ನು ಬೆಂಬಲಿಸಿ ಬಿಜೆಪಿ ಯನ್ನು ಈ ಬಾರಿಯೂ ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡುವುದಾಗಿ ಅವರು ತಿಳಿಸಿದರು.

  1.  

ರಾಜ್ಯದಲ್ಲಿ ಸಿದ್ದರಾಮಯ್ಯರ ನೇತೃತ್ವದಲ್ಲಿ ಸರಕಾರ ಹಗರಣಗಳಿಂದ ಕೂಡಿದ ಸರಕಾರ. ಅಭಿವೃದ್ಧಿ ಯೋಜನೆ ಹಣ ಬಿಡುಗಡೆ ಆಗುತ್ತಿಲ್ಲ. ಶಾಸಕರ ನಿಧಿಯ ಯೋಜನೆಗಳಿಗೂ ಅನುದಾನ ಬಿಡುಗಡೆ ಆಗಿಲ್ಲ. ಹಿಂದಿನ ಯಡಿಯೂರಪ್ಪ, ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯಕ್ಕೆ ಜಿಲ್ಲೆಗೆ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಆಗಿದೆ ಎಂದರು.

ನಾನೊಬ್ಬ ಪಕ್ಷದ ಕಾರ್ಯಕರ್ತನಾಗಿ ಇರುತ್ತೇನೆ. ನಾನು ವಿಧಾನ ಪರಿಷತ್ ಅಭ್ಯರ್ಥಿ ಆಕಾಂಕ್ಷಿ ಆಗಿರಲಿಲ್ಲ, ಪಕ್ಷ ನನಗೆ ಮೂರು ಬಾರಿ ಸಂಸದನಾಗುವ ಅವಕಾಶ, ರಾಜ್ಯ ಘಟಕದ ಅಧ್ಯಕ್ಷನಾಗುವ ಅವಕಾಶ ನೀಡಿದೆ.   ನಾನು ಯಾವುದೇ ಬೇಡಿಕೆ ನೀಡದೆ ಕೊಟ್ಟಿದೆ ಅದಕ್ಕಾಗಿ ನಾನು ಪಕ್ಷಕ್ಕೆ ಋಣಿ ಆಗಿದ್ದೇನೆ. ಮುಂದೆಯೂ ಪಕ್ಷ ಘಟನೆಯ ಕೆಲಸ ಮಾಡುತ್ತೇನೆ ಎಂದರು.

ದ.ಕ ಜಿ ಬೆಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ,ಪ್ರದಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಉಪಾಧ್ಯಕ್ಷ ರಾಕೇಶ್ ರೈ,ಜಿಲ್ಲಾ ವಕ್ತಾರ ರಾಜಗೋಪಾಲ ರೈ,ವಿಧಾನ ಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಜಿಲ್ಲಾ ಸಂಘದ ಕೋಶಾಧಿಕಾರಿ ಸಂಜಯ ಪ್ರಭು ಇದ್ದರು.

  1.  

Leave a Reply

Your email address will not be published. Required fields are marked *