Breaking News

ಕಾರವಾರ: ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

 

ಕಾರವಾರ: ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್‌ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಕಾರವಾರ ಬಿಜೆಪಿ ನಗರ ಮಂಡಲ ವತಿಯಿಂದ ನಗರದ ಸವಿತಾ ಸರ್ಕಲ್ ನಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನೇತೃತ್ವದಲ್ಲಿ ವಿಜಯೋತ್ಸವವನ್ನು ಆಚರಣೆ ಮಾಡಲಾಯಿತು. ನರೇಂದ್ರ ಮೋದಿ ಹಾಗೂ ಭಾರತ್ ಮಾತಾ ಕಿ ಜೈ  ಜೈಕಾರದೊಂದಿಗೆ ಪಟಾಕಿ ಸಿಡಿಸಿ ಕಾರ್ಯಕರ್ತರಲ್ಲಿ ಸಿಹಿ ಹಂಚುವ ಮೂಲಕ ಸಂಭ್ರಮ ಆಚರಿಸಲಾಯಿತು.

ನಗರ ಮಂಡಲ ಅಧ್ಯಕ್ಷ ನಾಗೇಶ್ ಕುರುಡೇಕರ್, ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ್ ಸೇರಿದಂತೆ ಬಿಜೆಪಿ ಮುಖಂಡರು, ಪದಾಧಿಕಾರಿಗಳು, ನಗರಸಭೆ ಸದಸ್ಯರು, ಶಕ್ತಿ ಹಾಗೂ ಮಹಾ ಶಕ್ತಿ ಕೇಂದ್ರ, ಮೋರ್ಚಾ ಹಾಗೂ ಕಾರ್ಯಕರ್ತರು ಇದ್ದರು.

  1.  

Leave a Reply

Your email address will not be published. Required fields are marked *