ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ಹಾಗೂ ಶಾಸಕ ಬಿ. ನಾಗೇಂದ್ರ ಅವರಿಗೆ 82 ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೋಮವಾರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಮಾಜಿ ಸಚಿವ ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಷರತ್ತು ಬದ್ದ ಜಾಮೀನು ಮಂಜೂರಿ ಮಾಡಿದ್ದು, ಎರಡು ಲಕ್ಷ ರೂಪಾಯಿ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ಮೇರೆಗೆ ಜಾಮೀನು ಮಂಜೂರುಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಪ್ರಕರಣದಲ್ಲಿ ಜು. 12 ರಂದು ನಾಗೇಂದ್ರ ಅವರನ್ನು ಇ.ಡಿ, ಬಂಧನ ಮಾಡಿತ್ತು.