ಮುಂಬೈ: ಮಾಜಿ ಸಚಿವ ಮತ್ತು ಎನ್ಸಿಪಿ ನಾಯಕ ಬಾಬಾ ಸಿದ್ದಿಕ್ ಅವರ ಹತ್ಯೆ ನಂತರ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ.
ಅಜಿತ್ ಪವಾರ್ ಅವರ ಬಣದ ನಾಯಕ ಬಾಬಾ ಸಿದ್ದಿಕ್ ಅವರಿಗೆ ಬಾಂದ್ರಾದ ನಿರ್ಮಲ್ ನಗರದ ಬಳಿ ಗುಂಡು ಹಾರಿಸಿ ಹತ್ಯೆ ಮಾಡಿರುವದರಿಂದ ಮುಂಜಾಗ್ರತಾ ಕ್ರಮವಾಗಿ ನಟ ಸಲ್ಮಾನ್ ಖಾನ್ ಅವರ ಅಪಾರ್ಟ್ ಮೆಂಟ್ ಹೊರಗಡೆಗೆ ಹೆಚ್ಚಿನ ಭದ್ರತೆ ನೀಡಲಾಗಿದೆ.
ಸಲ್ಮಾನ್ ಖಾನ್ ಅವರು ಲೀಲಾವತಿ ಆಸ್ಪತ್ರೆಗೆ ಭೇಟಿ ನೀಡಿ ಗುಂಡೇಟಿನಿಂದ ಮೃತಪಟ್ಟ ಸಿದ್ದಿಕ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಪೊಲೀಸರು ಇಬ್ಬರು ಬಂಧಿತ ಆರೋಪಿಗಳ ಗುರುತು ಬಹಿರಂಗ ಪಡಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಹರಿಯಾಣ ಮೂಲದ ಗುರ್ಮೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾಗಿದೆ. ಇಬ್ಬರೂ ಬಿಷ್ಣೋಯ್ ಗ್ಯಾಂಗ್ ಗೆ ಸೇರಿದ್ದಾರೆ ಎನ್ನಲಾಗಿದೆ.