ಬೆಂಗಳೂರು: ಸೆಷನ್ಸ್ ನ್ಯಾಯಾಲಯವು ಸೋಮವಾರ ನಟ ದರ್ಶನ್ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿದ ಹಿನ್ನಲೆಯಲ್ಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಜಾಮೀನು ಅರ್ಜಿಯನ್ನು ದರ್ಶನ್ ಪರ ವಕಾಲತ್ತು ವಹಿಸಿರುವ ಹೈಕೋರ್ಟ್ ವಕೀಲ ಎಸ್. ಸುನಿಲ್ ಕುಮಾರ್ ಅವರು ಮಂಗಳವಾರ ಮಧ್ಯಾಹ್ನ ಹೈಕೋರ್ಟ್ಗೆ ಸಲ್ಲಿಕೆ ಮಾಡಿದ್ದಾರೆ.
300 ಪುಟಗಳಿಗೂ ಅಧಿಕ ದಸ್ತಾವೇಜಿನ ಈ ಅರ್ಜಿಗೆ ಎಫ್ಆರ್ ನಂಬರ್ ಕೂಡ ನೀಡಲಾಗಿದ್ದು, ಅದರ ಕ್ರಿಮಿನಲ್ ಅರ್ಜಿ ಸಂಖ್ಯೆ ಇನ್ನಷ್ಟೇ ನಮೂದು ಆಗಬೇಕಿದೆ. ನಂತರವೇ ಅದು ನ್ಯಾಯ ಪೀಠದ ಮುಂದೆ ಬರಲಿದೆ ಅಥವಾ ಅವರ ಪರ ವಕೀಲ ಮೆಮೊ ಅರ್ಜಿ ಮೂಲಕ ತುರ್ತು ವಿಚಾರಣೆಗೆ ಮನವಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.