Breaking News

ರಾಷ್ಟ್ರಪತಿ ಬಳಿ ನಿಯೋಗ ಶೀಘ್ರ, ದೆಹಲಿ ಅಂಗಳಕ್ಕೆ ಬಿಜೆಪಿ, ಸರಕಾರ ವಜಾಕ್ಕೆ ಆಗ್ರಹ: ಬಿ. ವೈ ವಿಜಯೇಂದ್ರ

 

ಮಂಗಳೂರು: ರಾಜ್ಯದ‌ಲ್ಲಿ ಇರುವ ಸಿದ್ದರಾಮಯ್ಯ ನೇತೃತ್ವದ ಸರಕಾರ ವಜಾಕ್ಕೆ ಆಗ್ರಹಿಸಿ ಶೀಘ್ರವೇ ರಾಷ್ಟ್ರಪತಿ ಬಳಿಗೆ ನಿಯೋಗ ತೆರಳಲಿದ್ದೇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಂಗಳವಾರ ಬಂಟ್ವಾಳದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದಲ್ಲಿ ವ್ಯಾಪಕ ಹಗರಣಗಳು, ಭ್ರಷ್ಟಾಚಾರ ನಡೆಯುತ್ತಿವೆ. ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಹಗರಣ ನಡೆದಿದೆ. ಮುಖ್ಯಮಂತ್ರಿಯೇ ಮುಡಾ ಹಗರಣದ ಆರೋಪ ಎದುರಿಸುತ್ತಿದ್ದಾರೆ. ಇದರ ಜತೆಗೆ ರಾಜ್ಯದ ಅಭಿವೃದ್ಧಿಗೆ ಪೆಟ್ಟು ಬಿದ್ದಿದೆ. ಸರಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದ್ದು, ಕೂಡಲೇ ರಾಜ್ಯ ಸರಕಾರ ವಜಾ ಮಾಡುವಂತೆ ರಾಷ್ಟ್ರಪತಿ ಅವರನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲು ಆಗಿರುವ ಪ್ರಕರಣವನ್ನು ಕೈ ಬಿಡಲು ಗೃಹ ಸಚಿವ ಪರಮೇಶ್ವರ ಅವರ ನೇತೃತ್ವದ ಸಮಿತಿ ಶಿಫಾರಸ್ಸು ಮಾಡಿರುವುದು ಅಕ್ಷಮ್ಯ ಅಪರಾಧ. ರಾಜ್ಯ ಸರಕಾರ ದೇಶ ದ್ರೋಹಿಗಳಿಗೆ ರಕ್ಷಣೆ ನೀಡುತ್ತಿದೆ. ಇದರ ವಿರುದ್ಧ ಬಿಜೆಪಿ ಹುಬ್ಬಳ್ಳಿಯಲ್ಲಿ ಇದೇ 25 ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ ಎಂದು ತಿಳಿಸಿದರು.

  1.  

Leave a Reply

Your email address will not be published. Required fields are marked *