Breaking News
KARAVALIDAILYNEWS

ಉಡುಪಿಕಾರವಾರಕುಂದಾಪುರಜಿಲ್ಲೆಪುತ್ತೂರುಮಂಗಳೂರುರಾಜ್ಯಶಿರಸಿ

ಜಿಎಸ್ಟಿ ಜಾರಿ ಮಾಡಿದ್ದೂ ಮೋದಿ, ಹೆಚ್ಚೆಚ್ಚು ವಿಧಿಸಿದ್ದೂ ಅವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಅವರೇ: ಸಿ.ಎಂ. ಸಿದ್ದರಾಮಯ್ಯ ವ್ಯಂಗ್ಯ

 

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. ಜಿಎಸ್ಟಿ ಜಾರಿ ಮಾಡಿದ್ದೂ ಮೋದಿ. ಜಿಎಸ್ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿ ಅವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿ ಅವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.
ಮಹಾರಾಜ ಕಾಲೇಜು ಮೈದಾನದಲ್ಲಿ ದಸರಾ ಆಹಾರ ಮೇಳ ಉದ್ಘಾಟಿಸಿ ಅವರು ಮಾತನಾಡಿ, ಎಂಟು ವರ್ಷ ವಿಪರೀತ ಜಿಎಸ್ಟಿ ವಸೂಲಿ ಮಾಡಿದ್ರಲ್ಲಾ ಪ್ರಧಾನಿ ಮೋದಿಯವರೇ ಅದೆಲ್ಲವನ್ನೂ ಭಾರತೀಯರಿಗೆ ವಾಪಸ್ ಕೊಡ್ತೀರಾ ಎಂದು ಪ್ರಶ್ನೆ ಮಾಡಿದರು.

  1.  

ಜಿಎಸ್ಟಿ ಶೇ 18, 28 ಹೆಚ್ಚಿಸಿದ್ದರ ಬಗ್ಗೆ ವಿರೋಧ ಮಾಡಿದವರು ನಾವು. ಇಷ್ಟು ವರ್ಷ ವಸೂಲಿ ಮಾಡಿದವರೇ ಈಗ ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ. ಭಾರತೀಯರಿಗೆ ಎಷ್ಟು ನಾಜೂಕಾಗಿ ಟೋಪಿ ಹಾಕ್ತಾರೆ ನೋಡಿ. ನೀವು ಇದಕ್ಕೆಲ್ಲಾ ಮರಳಾಗಬಾರದು. ಬಡವರು ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದು 10 ಕೆಜಿ ಅಕ್ಕಿ ಕೊಟ್ಟಿದ್ದೇ ಸಿದ್ದರಾಮಯ್ಯ ಎಂದರು.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ವಿರೋಧಿಸಿದವರಿಗೆ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಚಾಟಿ ಬೀಸಿದ್ದನ್ನು ಪ್ರಸ್ತಾಪಿಸಿದ ಅವರು, ನನ್ನ ಹೆಸರಲ್ಲೇ ಇಬ್ಬರು ದೇವರಿದ್ದಾರೆ. ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು” ಹೀಗಾಗಿ ಬಾನು ಮುಷ್ತಾಕ್ ಗೆ ವಿರೋಧ ವ್ಯಕ್ತಪಡಿಸಿದ ಮೂರ್ಖರಿಗೆ ಸುಪ್ರೀಂಕೋರ್ಟ್ , ಸಂವಿಧಾನದ ಪೀಠಿಕೆ ಓದಲು ಹೇಳಿದೆ ಎಂದರು.

  1.  

Related posts

ಡಿ. 20 ರಂದು ವಿದ್ಯುತ್ ಇರಲ್ವಾ?

Karavalidailynews

ಸಿದ್ದೇಶ್ವರ ಶ್ರೀ ಗಳ ಅಂತ್ಯಕ್ರಿಯೆಗೆ ಶಾಂತಿಯಿಂದ ಸಹಕರಿಸಿ: ಸಿಎಂ ಬೊಮ್ಮಾಯಿ

Karavalidailynews

ಹೊಸಪೇಟೆ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೆರವಣಿಗೆ ಮೆರುಗು

Karavalidailynews

This website uses cookies to improve your experience. We'll assume you're ok with this, but you can opt-out if you wish. Accept Read More

Privacy & Cookies Policy
WP Twitter Auto Publish Powered By : XYZScripts.com