Breaking News
KARAVALIDAILYNEWS

ಜಿಲ್ಲೆಪುತ್ತೂರುಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪೋಷಣ ಅಭಿಯಾನ, ಪೋಷಣ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಬ್ರಿಜೇಶ್ ಚೌಟ

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪೋಷಣ ಅಭಿಯಾನ ನಡೆಯುತ್ತಿದ್ದು, ಮಹಿಳೆಯರು ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ನಿವಾರಿಸಲು ಮತ್ತು ಆರೋಗ್ಯವಂತ ಭಾರತ ನಿರ್ಮಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಹೇಳಿದರು.

ಸೋಮವಾರ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಆಶ್ರಯದಲ್ಲಿ ನಡೆದ ಪೋಷಣ ಅಭಿಯಾನ ಯೋಜನೆಯಡಿ “ಪೋಷಣ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗರ್ಭಿಣಿ, ಬಾಣಂತಿಯರು, ಮಕ್ಕಳು ಮತ್ತು ಬಾಲಕಿಯರಲ್ಲಿ ಅಪೌಷ್ಟಿಕತೆಯ ನಿವಾರಣೆ ಬಗ್ಗೆ ಅರಿವು ಮೂಡಿಸಬೇಕು. ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲರೂ ಕಾರ್ಯ ನಿರ್ವಹಿಸಬೇಕು ಎಂದರು.

  1.  

ಜಿಲ್ಲಾ ಪಂಚಾಯತ್ ಸಿಇಒ ನರ್ವಾಡೆ ವಿನಾಯಕ್ ಕಾರ್ಬಾರಿ ಅವರು ಮಾತನಾಡಿ, ಅಪೌಷ್ಟಿಕತೆಯ ಪಿಡುಗನ್ನು ಹೋಗಲಾಡಿಸಬೇಕು. ಅಂಗನವಾಡಿ ಕೇಂದ್ರಗಳ ಮೂಲಕ ಪೌಷ್ಟಿಕ ಆಹಾರವನ್ನು ವಿತರಿಸಲಾಗುತ್ತದೆ. ಮಕ್ಕಳಲ್ಲಿ ಕುಂಠಿತ ಬೆಳವಣಿಗೆ, ಅಪೌಷ್ಟಿಕತೆ, ರಕ್ತಹೀನತೆ ಮತ್ತು ಕಡಿಮೆ ತೂಕದ ಶಿಶು ಜನನ ಮಟ್ಟವನ್ನು ಕಡಿಮೆ ಮಾಡಲು ಸಮಾಜಕ್ಕೆ ಅಪೌಷ್ಟಿಕತೆ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ ಅವರು ಮಾತನಾಡಿ, ದೇಶದಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಎಲ್ಲ ಇಲಾಖೆಗಳು ಹೋರಾಟ ಮಾಡುತ್ತಿರುವುದು ಶ್ಲಾಘನೀಯ. ಮಕ್ಕಳಿಗೆ ಪೋಷಣೆ ನೀಡುವುದರ ಜೊತೆಗೆ ವಿದ್ಯಾಭ್ಯಾಸವನ್ನು ನೀಡಿ ಅವರು ದೇಶದ ಪ್ರಗತಿಗೆ ಕೊಡುಗೆ ನೀಡುವಂತಾಗಬೇಕು. ಮಕ್ಕಳಿಗೆ ಕಲಬೆರಕೆಯುತ ಆಹಾರವನ್ನು ನೀಡದೆ ಸದೃಢ ದೇಶದ ವ್ಯಕ್ತಿಗಳನ್ನಾಗಿ ಮಾಡಲು ಪೌಷ್ಟಿಕ ಆಹಾರವನ್ನು ನೀಡಬೇಕು. ಪೌಷ್ಟಿಕ ಆಹಾರವನ್ನು ನೀಡುವುದರಿಂದ ಸ್ವಾಸ್ಥ್ಯ ಭಾರತವನ್ನು ನಿರ್ಮಿಸಬಹುದು ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ನವೀನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ನವೀನ್ ಚಂದ್ರ ಕುಲಾಲ್, ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ. ಸಹನಾ, ಆಯುಷ್ ಅಧಿಕಾರಿ ಮೊಹಮ್ಮದ್ ಇಕ್ಬಾಲ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ.ಕೆ ಉಳೆಪಾಡಿ, ಅದಾನಿ ಫೌಂಡೇಶನ್ ಸಂಯೋಜಕಿ ಪ್ರೇಮಾ, ಜಿಲ್ಲಾ ನಿರೂಪಣಾಧಿಕಾರಿ ರಶ್ಮಿ ಕೆ.ಎಂ ಇದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್ ಎ ಸ್ವಾಗತಿಸಿದರು. ಮಂಗಳೂರು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ವಂದಿಸಿದರು. ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಚಂದ್ರಿಕಾ ನಿರೂಪಿಸಿದರು.

  1.  

Related posts

ಕಕ್ಯೆಪದವಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಭರ್ಜರಿ ಪ್ರಚಾರ

Karavalidailynews

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ಕ್ಷೇತ್ರದಲ್ಲಿ ಲೋಕಾ ಚುನಾವಣೆಯಲ್ಲಿ ಚೌಟ ಗೆಲುವಿನ ಹರಕೆ ತೀರಿಸಿದ ಕಾರ್ಯಕರ್ತರು

Karavalidailynews

ಹಿಂದಿ ಉಪನ್ಯಾಸಕರ ಕಾರ್ಯಾಗಾರವು ಸಹಕಾರಿ: ಡಿಡಿಪಿಯು ಜಯಣ್ಣ

Karavalidailynews

This website uses cookies to improve your experience. We'll assume you're ok with this, but you can opt-out if you wish. Accept Read More

Privacy & Cookies Policy
WP Twitter Auto Publish Powered By : XYZScripts.com