ಮಂಗಳೂರು: ಕೆ.ಎಸ್.ಆರ್.ಟಿ.ಸಿ ಮಂಗಳೂರು ಬಸ್ ನಿಲ್ದಾಣದ ಶೌಚಾಲಯದ ಕಟ್ಟಡದ ನವೀಕರಣ ಕಾಮಗಾರಿಯನ್ನು ಮಂಗಳೂರು ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ (ಎಂ.ಆರ್.ಪಿ.ಎಲ್) ಸಿ.ಎಸ್.ಆರ್ ಅನುದಾನದ ಅಡಿಯಲ್ಲಿ ಒಟ್ಟು ರೂ. 40 ಲಕ್ಷಗಳ ಕಾರ್ಯ ಯೋಜನೆ ಅಡಿಯಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ನವೀಕೃತ ಕಟ್ಟಡವನ್ನು ಉದ್ಘಾಟನೆ ಮಾಡಲಾಯಿತು.
ಮಂಗಳೂರು ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ಸ್ ಮುಖ್ಯ ವ್ಯವಸ್ಥಾಪಕ ಮನೋಜ್ ಕುಮಾರ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಂಗಳೂರು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ವಿಭಾಗೀಯ ಸಂಚಲನಾಧಿಕಾರಿ ಎಚ್.ಆರ್. ಕಮಲ್ ಕುಮಾರ್, ಲೆಕ್ಕಾಧಿಕಾರಿ ಹರೀಶ್ ಕೊಠಾರಿ, ವಿಭಾಗೀಯ ಯಾಂತ್ರಿಕ ಅಭಿಯಂತರ ವಿನಯ್, ಮತ್ತು ಸಹಾಯಕ ಅಭಿಯಂತರರಾದ ಹರೀಶ್ ಯು.ಎನ್ ಶರತ್ ಕುಮಾರ್ ಎನ್, ಹಾಗೂ ಎಂ ಆರ್ಪಿಎಲ್ ಎಂಜಿನಿಯರ್ ಹರೀಶ್ರಾವ್ ಇದ್ದರು.