Breaking News
KARAVALIDAILYNEWS

ಉಡುಪಿಕಾರವಾರಕುಂದಾಪುರಜಿಲ್ಲೆಪುತ್ತೂರುಮಂಗಳೂರುಶಿರಸಿ

ಎಕೆಎಂಎಸ್ ಬಸ್ ಮಾಲೀಕ ಸೈಪು ಯಾನೇ ಸೈಫುದ್ದೀನ್ ಬರ್ಬರ ಹತ್ಯೆ, ಮೃತದೇಹದ ಮೆರವಣಿಗೆ

 

ಉಡುಪಿ: ಮಲ್ಪೆ ಕೊಡವೂರು ಸಮೀಪದ ಸಾಲ್ಮರ ಎಂಬಲ್ಲಿ ಶನಿವಾರ ಹಾಡಹಗಲೆ ಬರ್ಬರ ಕೊಲೆಯಾಗಿದ್ದ ಎಕೆಎಂಎಸ್ ಬಸ್ ಮಾಲೀಕ, ರೌಡಿಶೀಟರ್ ಸೈಫ್ ಯಾನೆ ಸೈಫುದ್ದೀನ್ ಆತ್ರಾಡಿ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಮಣಿಪಾಲ ಕೆಎಂಸಿ ಆಸ್ಪತ್ರೆಯ ಶವಗಾರದಲ್ಲಿ ನಡೆದಿದ್ದು ಬಳಿಕ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಯಿತು.

  1.  

ಮಣಿಪಾಲ ಅವರ ಮನೆಯಿಂದ ಮೃತದೇಹದ ಮೆರವಣಿಗೆ ಆತ್ರಾಡಿ ಮಸೀದಿವರೆಗೆ ನಡೆಯಿತು. ಅವರೇ ಮಾಲೀಕರಾಗಿದ್ದ ಬಸ್ ಗಳು ಮೆರವಣಿಗೆಯಲ್ಲಿ ಸೇರಿಕೊಂಡಿದ್ದು, ಸಾವಿರಾರು ಮಂದಿ ಪಾಲ್ಗೊಂಡಿದ್ದರು.
ಅತ್ರಾಡಿ ಮಸೀದಿಯಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿದ್ದು, ನಂತರ ಧಾರ್ಮಿಕ ವಿಧಿಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ತಿಳಿದು ಬಂದಿದೆ.

ಎಕೆಎಂಎಸ್ ಬಸ್ ಮಾಲೀಕ ಸೈಪು ಯಾನೇ ಸೈಫುದ್ದೀನ್ ಆತ್ರಾಡಿ ಅವರನ್ನು ಹತ್ಯೆ ಮಾಡಲಾಗಿತ್ತು. ಸೈಫುದ್ದೀನ್ ಅವರು ತಮ್ಮ ಮನೆಯಲ್ಲಿ ಒಬ್ಬರೇ ಇರುವ ವೇಳೆ ಆಗಮಿಸಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದರು. ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಡಿವೈಎಸ್ಪಿ ಪ್ರಭು ಡಿ.ಟಿ. ಪರಿಶೀಲನೆ ನಡೆಸಿದ್ದರು.

  1.  

Related posts

ಕುಡ್ಲದಲ್ಲಿ ಮೆಗಾ ಸೈಕ್ಲೋಥಾನ್ ಜಾಥಾ: ಸೈಕ್ಲಿಸ್ಟ್ ಗಳ ಕಲರವ

Karavalidailynews

ಮತದಾನ ಹೆಚ್ಚಳಕ್ಕೆ ಸ್ವೀಪ್ ನಿಂದ ಜಾಗೃತಿ ಕಾರ್ಯಕ್ರಮ: ಸಿಇಒ ಪ್ರಸನ್ನ

Karavalidailynews

ಜಾತಿ ಮಾತುಗಳು ರಾಜಕಾರಣದಲ್ಲಿ ಅಪ್ರಸ್ತುತ: ಬೊಮ್ಮಾಯಿ

Karavalidailynews

This website uses cookies to improve your experience. We'll assume you're ok with this, but you can opt-out if you wish. Accept Read More

Privacy & Cookies Policy
WP Twitter Auto Publish Powered By : XYZScripts.com